<p><strong>ಗೌರಿಬಿದನೂರು:</strong> ನಗರದ ಸುಮಂಗಳಿ ಕಲ್ಯಾಣ ಮಂಟಪದಲ್ಲಿ ಎಂಎಸ್ಎಸ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ 33ನೇ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ ಉದ್ಘಾಟಿಸಿ ಮಾತನಾಡಿ, ತಂದೆ-ತಾಯಿ ಮಕ್ಕಳನ್ನು ಶಾಲೆಗೆ ಕಳುಹಿಸಿ ಹೊಣೆಗಾರಿಕೆಯಿಂದ ಕೈ ತೊಳೆದುಕೊಳ್ಳದೆ ಸಮಾಜದಲ್ಲಿ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ತಯಾರು ಮಾಡಲು ಶಿಕ್ಷಕರೊಂದಿಗೆ ಸಹಕರಿಸಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮಿಸುವವರು ಮಾತ್ರ ಗೆಲುವು ಪಡೆಯಲು ಸಾಧ್ಯ ಎಂದು ತಿಳಿಸಿದರು.</p>.<p>ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು ಮತ್ತು ಇತರ ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ ಜೀವನದಲ್ಲಿ ತಂದೆ-ತಾಯಿಗೆ ಹಾಗೂ ಗುರು-ಹಿರಿಯರಿಗೆ ಕೀರ್ತಿ ತರುವ ಗುರಿ ಇಟ್ಟುಕೊಂಡು ಉನ್ನತ ಶಿಕ್ಷಣ ಪಡೆಯುವತ್ತ ಗಮನ ಹರಿಸಬೇಕು. ಹಾಗೆಯೇ ಸಮಾಜ ಸೇವೆಯಲ್ಲಿಯೂ ಸಹ ಈ ವಿದ್ಯಾ ಸಂಸ್ಥೆಯು ತನ್ನದೆ ಆದ ಛಾಪು ಮೂಡಿಸಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಜತೆಗೆ ದಿನಪತ್ರಿಕೆಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಪೋಷಕರು ದಿನ ಪತ್ರಿಕೆಗಳನ್ನು ಮನೆಗೆ ತರಿಸುವ, ಓದುವ ಹವ್ಯಾಸ ಮಾಡಿಕೊಳ್ಳುವ ಮೂಲಕ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು. </p>.<p>ಸಂಸ್ಥೆ ಕಾರ್ಯದರ್ಶಿ ಪಠಾಣ್ ಸೈಫುಲ್ಲಾ, ಫಾಹೀಮಾ ಖಾನಮ್, ಮೊಹಮ್ಮದ್ ಜೀಲಾನ್, ಡಾ.ಆಫ್ರೀದಿ ಪಠಾಣ್ , ಅಮೀನಾ ನೂರೈನ್, ಪಠಾಣ್ ರಹಮತುಲ್ಲಾ, ಮುಖ್ಯ ಶಿಕ್ಷಕರಾದ ಆನಂದ್ ಕುಮಾರ್, ರತ್ನಮ್ಮ, ರಾಜಾ ಹೊನ್ನಪ್ಪ ನಾಯಕ್, ಹಿರಿಯ ಶಿಕ್ಷಕರಾದ ಸರಸ್ವತಮ್ಮ, ಶಿವಲಿಂಗಪ್ಪ, ನರಸಿಂಹಮೂರ್ತಿ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಸುಮಂಗಳಿ ಕಲ್ಯಾಣ ಮಂಟಪದಲ್ಲಿ ಎಂಎಸ್ಎಸ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ 33ನೇ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ ಉದ್ಘಾಟಿಸಿ ಮಾತನಾಡಿ, ತಂದೆ-ತಾಯಿ ಮಕ್ಕಳನ್ನು ಶಾಲೆಗೆ ಕಳುಹಿಸಿ ಹೊಣೆಗಾರಿಕೆಯಿಂದ ಕೈ ತೊಳೆದುಕೊಳ್ಳದೆ ಸಮಾಜದಲ್ಲಿ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ತಯಾರು ಮಾಡಲು ಶಿಕ್ಷಕರೊಂದಿಗೆ ಸಹಕರಿಸಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮಿಸುವವರು ಮಾತ್ರ ಗೆಲುವು ಪಡೆಯಲು ಸಾಧ್ಯ ಎಂದು ತಿಳಿಸಿದರು.</p>.<p>ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳು ಮತ್ತು ಇತರ ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ ಜೀವನದಲ್ಲಿ ತಂದೆ-ತಾಯಿಗೆ ಹಾಗೂ ಗುರು-ಹಿರಿಯರಿಗೆ ಕೀರ್ತಿ ತರುವ ಗುರಿ ಇಟ್ಟುಕೊಂಡು ಉನ್ನತ ಶಿಕ್ಷಣ ಪಡೆಯುವತ್ತ ಗಮನ ಹರಿಸಬೇಕು. ಹಾಗೆಯೇ ಸಮಾಜ ಸೇವೆಯಲ್ಲಿಯೂ ಸಹ ಈ ವಿದ್ಯಾ ಸಂಸ್ಥೆಯು ತನ್ನದೆ ಆದ ಛಾಪು ಮೂಡಿಸಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಜತೆಗೆ ದಿನಪತ್ರಿಕೆಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಪೋಷಕರು ದಿನ ಪತ್ರಿಕೆಗಳನ್ನು ಮನೆಗೆ ತರಿಸುವ, ಓದುವ ಹವ್ಯಾಸ ಮಾಡಿಕೊಳ್ಳುವ ಮೂಲಕ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು. </p>.<p>ಸಂಸ್ಥೆ ಕಾರ್ಯದರ್ಶಿ ಪಠಾಣ್ ಸೈಫುಲ್ಲಾ, ಫಾಹೀಮಾ ಖಾನಮ್, ಮೊಹಮ್ಮದ್ ಜೀಲಾನ್, ಡಾ.ಆಫ್ರೀದಿ ಪಠಾಣ್ , ಅಮೀನಾ ನೂರೈನ್, ಪಠಾಣ್ ರಹಮತುಲ್ಲಾ, ಮುಖ್ಯ ಶಿಕ್ಷಕರಾದ ಆನಂದ್ ಕುಮಾರ್, ರತ್ನಮ್ಮ, ರಾಜಾ ಹೊನ್ನಪ್ಪ ನಾಯಕ್, ಹಿರಿಯ ಶಿಕ್ಷಕರಾದ ಸರಸ್ವತಮ್ಮ, ಶಿವಲಿಂಗಪ್ಪ, ನರಸಿಂಹಮೂರ್ತಿ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>