<p><strong>ಗೌರಿಬಿದನೂರು</strong>: ಪೌರ ಕಾರ್ಮಿಕರ ಸೇವೆ ಅನನ್ಯವಾದದ್ದು. ಅವರೇ ನಿಜವಾದ ಕಾಯಕ ಯೋಗಿಗಳು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಪೌರ ಕಾರ್ಮಿಕರಿಗೆ ಕೃತಜ್ಞತೆ ಹಾಗೂ ಗೌರವ ಸೂಚಿಸುವ ದಿನಾಚರಣೆ ಇದಾಗಿದೆ. ಇಂದು ಅನೇಕ ಇಲಾಖೆಗಳ ಕಾರ್ಮಿಕರು ನೌಕರರು ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಪೌರ ಕಾರ್ಮಿಕ ಸೇವೆ ಶ್ರಮದಾಯಕ ಹಾಗೂ ಶ್ರೇಷ್ಠ ಸೇವೆ ಎಂದರು.</p>.<p>ಪೌರಾಯುಕ್ತ ರಮೇಶ್ ಮಾತನಾಡಿ, ನಗರದ 31 ವಾರ್ಡ್ಗಳಲ್ಲಿ 96 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯದೊತ್ತಡ ಹೆಚ್ಚಾಗುತ್ತಿದೆ, ಹೆಚ್ಚಿನ ಪೌರಕಾರ್ಮಿಕರ ಅಗತ್ಯವಿದೆ ಎಂದರು.</p>.<p>ತಹಶೀಲ್ದಾರ್ ಅರವಿಂದ್ ಮಾತನಾಡಿ, ಪೌರ ಕಾರ್ಮಿಕರು ಕಾರ್ಯದ ಒತ್ತಡಗಳಿಂದ ತಮ್ಮ ಆರೋಗ್ಯ ಕಡೆಗಣಿಸಬಾರದು. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದರು.</p>.<p>ಅಧ್ಯಕ್ಷ ಲಕ್ಷ್ಮಿ ನಾರಾಯಣಪ್ಪ ಮಾತನಾಡಿ, ನಗರವನ್ನು ಸುಂದರ ಹಾಗೂ ಸ್ವಚ್ಛವಾಗಿ ಮಾಡುವ ಶಕ್ತಿ ಪೌರಕಾರ್ಮಿಕರಲ್ಲಿದೆ. ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಸಾರ್ವಜನಿಕರ ಆರೋಗ್ಯ ಕಾಪಾಡುವ ವೈದ್ಯರಾಗಿದ್ದಾರೆ ಎಂದರು.</p>.<p>ಪೌರ ಕಾರ್ಮಿಕರ ಕ್ರೀಡಾಕೂಟದಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ನಗರಸಭಾ ಉಪಾಧ್ಯಕ್ಷ ಫರೀದ್, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ, ನಗರಸಭಾ ಸದಸ್ಯ ವಿ.ರಮೇಶ್, ಸಪ್ತಗಿರಿ, ರಾಜಕುಮಾರ್, ಶ್ರೀಕಾಂತ್, ಖಲಿಮ್, ಡಿಜೆ ಚಂದ್ರಮೋಹನ್, ಬ್ಯಾಟರಿ ಜಯರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಪೌರ ಕಾರ್ಮಿಕರ ಸೇವೆ ಅನನ್ಯವಾದದ್ದು. ಅವರೇ ನಿಜವಾದ ಕಾಯಕ ಯೋಗಿಗಳು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಪೌರ ಕಾರ್ಮಿಕರಿಗೆ ಕೃತಜ್ಞತೆ ಹಾಗೂ ಗೌರವ ಸೂಚಿಸುವ ದಿನಾಚರಣೆ ಇದಾಗಿದೆ. ಇಂದು ಅನೇಕ ಇಲಾಖೆಗಳ ಕಾರ್ಮಿಕರು ನೌಕರರು ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಪೌರ ಕಾರ್ಮಿಕ ಸೇವೆ ಶ್ರಮದಾಯಕ ಹಾಗೂ ಶ್ರೇಷ್ಠ ಸೇವೆ ಎಂದರು.</p>.<p>ಪೌರಾಯುಕ್ತ ರಮೇಶ್ ಮಾತನಾಡಿ, ನಗರದ 31 ವಾರ್ಡ್ಗಳಲ್ಲಿ 96 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯದೊತ್ತಡ ಹೆಚ್ಚಾಗುತ್ತಿದೆ, ಹೆಚ್ಚಿನ ಪೌರಕಾರ್ಮಿಕರ ಅಗತ್ಯವಿದೆ ಎಂದರು.</p>.<p>ತಹಶೀಲ್ದಾರ್ ಅರವಿಂದ್ ಮಾತನಾಡಿ, ಪೌರ ಕಾರ್ಮಿಕರು ಕಾರ್ಯದ ಒತ್ತಡಗಳಿಂದ ತಮ್ಮ ಆರೋಗ್ಯ ಕಡೆಗಣಿಸಬಾರದು. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದರು.</p>.<p>ಅಧ್ಯಕ್ಷ ಲಕ್ಷ್ಮಿ ನಾರಾಯಣಪ್ಪ ಮಾತನಾಡಿ, ನಗರವನ್ನು ಸುಂದರ ಹಾಗೂ ಸ್ವಚ್ಛವಾಗಿ ಮಾಡುವ ಶಕ್ತಿ ಪೌರಕಾರ್ಮಿಕರಲ್ಲಿದೆ. ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಸಾರ್ವಜನಿಕರ ಆರೋಗ್ಯ ಕಾಪಾಡುವ ವೈದ್ಯರಾಗಿದ್ದಾರೆ ಎಂದರು.</p>.<p>ಪೌರ ಕಾರ್ಮಿಕರ ಕ್ರೀಡಾಕೂಟದಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ನಗರಸಭಾ ಉಪಾಧ್ಯಕ್ಷ ಫರೀದ್, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗರೆಡ್ಡಿ, ನಗರಸಭಾ ಸದಸ್ಯ ವಿ.ರಮೇಶ್, ಸಪ್ತಗಿರಿ, ರಾಜಕುಮಾರ್, ಶ್ರೀಕಾಂತ್, ಖಲಿಮ್, ಡಿಜೆ ಚಂದ್ರಮೋಹನ್, ಬ್ಯಾಟರಿ ಜಯರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>