<p><strong>ಗೌರಿಬಿದನೂರು</strong>: ಇಲ್ಲಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. </p>.<p>ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ಪತಿಯಾದ ಆರೋಪಿ ನಾಗರಾಜು ಅವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದ ನಾಗರಾಜು ಮತ್ತು ಹೇಮಾವತಿ ಆರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಎರಡನೇ ಮಗುವಿನ ಹೆರಿಗೆಗೆ ತವರು ಮನೆಗೆ ಹೋಗಿದ್ದ ಹೇಮಾವತಿ ಮತ್ತೆ ಗಂಡನ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಆರೋಪಿಯು, ಭಾನುವಾರ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ ಪೂಜಾ ಸಾಮಗ್ರಿ ಖರೀದಿಸುತ್ತಿದ್ದ ಹೇಮಾವತಿ ಅವರನ್ನು ಚಾಕುವಿನಿಂದ ತಿವಿದಿದ್ದಾನೆ. </p>.<p>ಈ ವೇಳೆ ಸ್ಥಳೀಯರು ಮತ್ತು ಹೇಮಾವತಿ ಅವರ ಅಜ್ಜಿ ಗಂಗಮ್ಮ ಬಂದು ಬಿಡಿಸಿದ್ದಾರೆ. ಆದಾಗ್ಯೂ, ಹೇಮಾವತಿ ಅವರ ತಲೆ, ಬೆನ್ನು ಮತ್ತು ಕೈ ಬೆರಳುಗಳಿಗೆ ಗಾಯಗಳಾಗಿದ್ದು, ಅವರನ್ನು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಅಲ್ಲದೆ, ತನ್ನ ಪತ್ನಿಯನ್ನು ಉದ್ದೇಶಿಸಿ, ‘ನೀನು ನಿನ್ನ ತವರು ಊರಿನಲ್ಲಿ ಯಾರೊಂದಿಗೊ ಸಂಬಂಧ ಹೊಂದಿದ್ದೀಯಾ. ಇದೇ ಕಾರಣಕ್ಕೆ ನನ್ನ ಮನೆಗೆ ಬರುತ್ತಿಲ್ಲ’ ಎಂದು ಆರೋಪಿ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಇಲ್ಲಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. </p>.<p>ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ಪತಿಯಾದ ಆರೋಪಿ ನಾಗರಾಜು ಅವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದ ನಾಗರಾಜು ಮತ್ತು ಹೇಮಾವತಿ ಆರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಎರಡನೇ ಮಗುವಿನ ಹೆರಿಗೆಗೆ ತವರು ಮನೆಗೆ ಹೋಗಿದ್ದ ಹೇಮಾವತಿ ಮತ್ತೆ ಗಂಡನ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಆರೋಪಿಯು, ಭಾನುವಾರ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ ಪೂಜಾ ಸಾಮಗ್ರಿ ಖರೀದಿಸುತ್ತಿದ್ದ ಹೇಮಾವತಿ ಅವರನ್ನು ಚಾಕುವಿನಿಂದ ತಿವಿದಿದ್ದಾನೆ. </p>.<p>ಈ ವೇಳೆ ಸ್ಥಳೀಯರು ಮತ್ತು ಹೇಮಾವತಿ ಅವರ ಅಜ್ಜಿ ಗಂಗಮ್ಮ ಬಂದು ಬಿಡಿಸಿದ್ದಾರೆ. ಆದಾಗ್ಯೂ, ಹೇಮಾವತಿ ಅವರ ತಲೆ, ಬೆನ್ನು ಮತ್ತು ಕೈ ಬೆರಳುಗಳಿಗೆ ಗಾಯಗಳಾಗಿದ್ದು, ಅವರನ್ನು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಅಲ್ಲದೆ, ತನ್ನ ಪತ್ನಿಯನ್ನು ಉದ್ದೇಶಿಸಿ, ‘ನೀನು ನಿನ್ನ ತವರು ಊರಿನಲ್ಲಿ ಯಾರೊಂದಿಗೊ ಸಂಬಂಧ ಹೊಂದಿದ್ದೀಯಾ. ಇದೇ ಕಾರಣಕ್ಕೆ ನನ್ನ ಮನೆಗೆ ಬರುತ್ತಿಲ್ಲ’ ಎಂದು ಆರೋಪಿ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>