<p><strong>ಗೌರಿಬಿದನೂರು</strong>: ತಾಲ್ಲೂಕಿನ ಉತ್ತರ ಪಿನಾಕಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಅಣೆಕಟ್ಟೆಗೆ ನೂತನ ಎಫ್ಆರ್ಪಿ ಗೇಟ್ ಅಳವಡಿಸುವ ಕಾಮಗಾರಿಗೆ ಶಾಸಕ ಕೆ. ಎಚ್.ಪುಟ್ಟಸ್ವಾಮಿ ಗೌಡ ಬುಧವಾರ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಜೀವ ನದಿಯಾಗಿದ್ದ ಉತ್ತರ ಪಿನಾಕಿನಿ, ಮಳೆ ಬಂದು ತುಂಬಿ ಹರಿದಾಗ ಶಿಥಿಲವಾಗಿದ್ದ ಗೇಟ್ಗಳಿಂದ ತಾಲ್ಲೂಕಿನ ಕೆರೆಗಳಿಗೆ ತುಂಬದೆ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಈ ಗೇಟ್ ಅಳವಡಿಕೆಯಿಂದ ತಾಲ್ಲೂಕಿನ ಕೆರೆಗಳಿಗೆ ಸರಾಗವಾಗಿ ನೀರು ಹರಿದು ಕೆರೆ ತುಂಬಲಿವೆ ಎಂದರು.</p>.<p>ತಾಲ್ಲೂಕಿನ 19 ಗ್ರಾಮಗಳಲ್ಲಿ ₹3.20 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಸಣ್ಣ ರಸ್ತೆಗಳು ಒಂದು ತಿಂಗಳೊಳಗೆ ಹಾಗೂ ದೊಡ್ಡ ರಸ್ತೆಗಳು ಎರಡು ತಿಂಗಳ ಒಳಗೆ ಕಾಮಗಾರಿ ಮಾಡಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ಮುಂದಿನ ವಾರ ₹5 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ, ಶ್ರೀನಿವಾಸ್ ಗೌಡ, ಕಲೀಂ ಉಲ್ಲಾ, ಅಮರನಾಥ್, ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ತಾಲ್ಲೂಕಿನ ಉತ್ತರ ಪಿನಾಕಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಅಣೆಕಟ್ಟೆಗೆ ನೂತನ ಎಫ್ಆರ್ಪಿ ಗೇಟ್ ಅಳವಡಿಸುವ ಕಾಮಗಾರಿಗೆ ಶಾಸಕ ಕೆ. ಎಚ್.ಪುಟ್ಟಸ್ವಾಮಿ ಗೌಡ ಬುಧವಾರ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಜೀವ ನದಿಯಾಗಿದ್ದ ಉತ್ತರ ಪಿನಾಕಿನಿ, ಮಳೆ ಬಂದು ತುಂಬಿ ಹರಿದಾಗ ಶಿಥಿಲವಾಗಿದ್ದ ಗೇಟ್ಗಳಿಂದ ತಾಲ್ಲೂಕಿನ ಕೆರೆಗಳಿಗೆ ತುಂಬದೆ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಈ ಗೇಟ್ ಅಳವಡಿಕೆಯಿಂದ ತಾಲ್ಲೂಕಿನ ಕೆರೆಗಳಿಗೆ ಸರಾಗವಾಗಿ ನೀರು ಹರಿದು ಕೆರೆ ತುಂಬಲಿವೆ ಎಂದರು.</p>.<p>ತಾಲ್ಲೂಕಿನ 19 ಗ್ರಾಮಗಳಲ್ಲಿ ₹3.20 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಸಣ್ಣ ರಸ್ತೆಗಳು ಒಂದು ತಿಂಗಳೊಳಗೆ ಹಾಗೂ ದೊಡ್ಡ ರಸ್ತೆಗಳು ಎರಡು ತಿಂಗಳ ಒಳಗೆ ಕಾಮಗಾರಿ ಮಾಡಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ಮುಂದಿನ ವಾರ ₹5 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ, ಶ್ರೀನಿವಾಸ್ ಗೌಡ, ಕಲೀಂ ಉಲ್ಲಾ, ಅಮರನಾಥ್, ಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>