<p><strong>ಗೌರಿಬಿದನೂರು</strong>: ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅರಣ್ಯ ಇಲಾಖೆ ಅನುಮತಿ ಪಡೆಯದೆ ಕಡಿಸಿದ್ದಾರೆ ಎಂದು ರೈತ ಸಂಘ ದೂರಿದೆ.</p>.<p>ಸುಮಾರು 20 ರಿಂದ 25 ವರ್ಷಗಳಿಂದ ಬೆಳೆದಿದ್ದ ಪೆಲ್ಟೊ ಫಾರ್ಮ್ ಮರವನ್ನು ಕಡಿಯಲಾಗಿದೆ. ಪಕ್ಕದಲ್ಲೇ ಇರುವ ಬೇವಿನ ಮರದ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಲೋಕೇಶ್ ಗೌಡ ಆರೋಪಿಸಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆ ಆವರಣದಲ್ಲಿರುವ ನೀಲಗಿರಿ ಮರಗಳನ್ನು ಕಡಿಯಲು ಟೆಂಡರ್ ಆಗಿದ್ದರೆ, ಇಲ್ಲಿನ ಅಧಿಕಾರಿಗಳು ಪಕ್ಕದ ನಿರೀಕ್ಷಣ ಮಂದಿರದ ಅವರಣದಲ್ಲಿರುವ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮರ ಕಡಿಯುವವರತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇಲ್ಲಿನ ಮರ ಕಡಿಯಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅರಣ್ಯ ಇಲಾಖೆ ಅನುಮತಿ ಪಡೆಯದೆ ಕಡಿಸಿದ್ದಾರೆ ಎಂದು ರೈತ ಸಂಘ ದೂರಿದೆ.</p>.<p>ಸುಮಾರು 20 ರಿಂದ 25 ವರ್ಷಗಳಿಂದ ಬೆಳೆದಿದ್ದ ಪೆಲ್ಟೊ ಫಾರ್ಮ್ ಮರವನ್ನು ಕಡಿಯಲಾಗಿದೆ. ಪಕ್ಕದಲ್ಲೇ ಇರುವ ಬೇವಿನ ಮರದ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಲೋಕೇಶ್ ಗೌಡ ಆರೋಪಿಸಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆ ಆವರಣದಲ್ಲಿರುವ ನೀಲಗಿರಿ ಮರಗಳನ್ನು ಕಡಿಯಲು ಟೆಂಡರ್ ಆಗಿದ್ದರೆ, ಇಲ್ಲಿನ ಅಧಿಕಾರಿಗಳು ಪಕ್ಕದ ನಿರೀಕ್ಷಣ ಮಂದಿರದ ಅವರಣದಲ್ಲಿರುವ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮರ ಕಡಿಯುವವರತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಇಲ್ಲಿನ ಮರ ಕಡಿಯಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>