<p><strong>ಗೌರಿಬಿದನೂರು</strong>: ನಗರಸಭೆ ವ್ಯಾಪ್ತಿಯ ಮಾದನಹಳ್ಳಿ ಹಿಂಭಾಗದಲ್ಲಿ ಹಾದು ಹೋಗಿರುವ ಬೈಪಾಸ್ ರಸ್ತೆ ಬದಿಯ ಮೇಲ್ಸೇತುವೆ ಬಳಿ ಹರಿಯುವ ಉತ್ತರ ಪಿನಾಕಿನಿ ನದಿ ದಡದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯಲಾಗಿದೆ.</p>.<p>ಇತ್ತೀಚೆಗೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಹಲವು ವರ್ಷಗಳ ನಂತರ ಉತ್ತರ ಪಿನಾಕಿನಿ ನದಿ ಹರಿಯಲು ಪ್ರಾರಂಭಿಸುತ್ತಿದೆ. ಆದರೆ ಕಟ್ಟಡದ ಅವಶೇಷಗಳನ್ನು ನದಿದಂಡೆಯಲ್ಲಿ ವಿಲೇವಾರಿ ಮಾಡುತ್ತಿರುವುದು ನದಿ ಹರಿವಿಗೆ ತಡೆಯೊಡ್ದುವುದು ಒಂದೆಡೆಯಾದರೆ ಪರಿಸರಕ್ಕೂ ಮಾರಕವಾಗಿ ಪರಿಣಮಿಸಿದೆ.</p>.<p>ನದಿ ದಂಡೆಯಲ್ಲೇ ಕಟ್ಟಡದ ಅವಶೇಷಗಳು ಹಾಗೂ ತ್ಯಾಜ್ಯ ಸುರಿಯುವುದರಿಂದ ನದಿಮೂಲಕ್ಕೆ ಪೆಟ್ಟು ನೀಡುವುದಲ್ಲದೆ, ಜಲಚರಗಳ ಜೀವಕ್ಕೂ ಕುತ್ತು ತಂದಿದೆ. ಇದು ಪರಿಸರದ ಮೇಲೆ ನೇರ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಹೇಳಿದರು.</p>.<p>ನದಿ ದಂಡೆಯಲ್ಲಿ ಕಟ್ಟಡದ ಅವಶೇಷ ಸುರಿಯುವುದರಿಂದ ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ನದಿಮೂಲಕ್ಕೂ ಹೊಡೆತ ಬೀಳುತ್ತಿದೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ನಗರಸಭೆ ವ್ಯಾಪ್ತಿಯ ಮಾದನಹಳ್ಳಿ ಹಿಂಭಾಗದಲ್ಲಿ ಹಾದು ಹೋಗಿರುವ ಬೈಪಾಸ್ ರಸ್ತೆ ಬದಿಯ ಮೇಲ್ಸೇತುವೆ ಬಳಿ ಹರಿಯುವ ಉತ್ತರ ಪಿನಾಕಿನಿ ನದಿ ದಡದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯಲಾಗಿದೆ.</p>.<p>ಇತ್ತೀಚೆಗೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಹಲವು ವರ್ಷಗಳ ನಂತರ ಉತ್ತರ ಪಿನಾಕಿನಿ ನದಿ ಹರಿಯಲು ಪ್ರಾರಂಭಿಸುತ್ತಿದೆ. ಆದರೆ ಕಟ್ಟಡದ ಅವಶೇಷಗಳನ್ನು ನದಿದಂಡೆಯಲ್ಲಿ ವಿಲೇವಾರಿ ಮಾಡುತ್ತಿರುವುದು ನದಿ ಹರಿವಿಗೆ ತಡೆಯೊಡ್ದುವುದು ಒಂದೆಡೆಯಾದರೆ ಪರಿಸರಕ್ಕೂ ಮಾರಕವಾಗಿ ಪರಿಣಮಿಸಿದೆ.</p>.<p>ನದಿ ದಂಡೆಯಲ್ಲೇ ಕಟ್ಟಡದ ಅವಶೇಷಗಳು ಹಾಗೂ ತ್ಯಾಜ್ಯ ಸುರಿಯುವುದರಿಂದ ನದಿಮೂಲಕ್ಕೆ ಪೆಟ್ಟು ನೀಡುವುದಲ್ಲದೆ, ಜಲಚರಗಳ ಜೀವಕ್ಕೂ ಕುತ್ತು ತಂದಿದೆ. ಇದು ಪರಿಸರದ ಮೇಲೆ ನೇರ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಹೇಳಿದರು.</p>.<p>ನದಿ ದಂಡೆಯಲ್ಲಿ ಕಟ್ಟಡದ ಅವಶೇಷ ಸುರಿಯುವುದರಿಂದ ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ನದಿಮೂಲಕ್ಕೂ ಹೊಡೆತ ಬೀಳುತ್ತಿದೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>