<p><strong>ಗೌರಿಬಿದನೂರು</strong>: ಎತ್ತಿನ ಹೊಳೆಯ ಯೋಜನೆಯ ಸತ್ಯಾನ್ವೇಷಣೆಯಾಗಬೇಕೆಂದು ಒತ್ತಾಯಿಸಿ ಪ್ರಜಾಸೌಧದ ಆವರಣದಲ್ಲಿ ಪರಿಸರವಾದಿ ಚೌಡಪ್ಪ ಬುಧವಾರ ಬೆಳಗ್ಗೆಯಿಂದ ಸಂಜೆವರೆಗೆ ಒಂದು ದಿನದ ಮೌನ ಪ್ರತಿಭಟನೆ ನಡೆಸಿದರು.</p>.<p>ಎತ್ತಿನ ಹೊಳೆ ಎಂಬ ದೋಖಾ ಯೋಜನೆಯಿಂದ ಜಿಲ್ಲೆಗೆ ಒಂದು ಹಾನಿ ನೀರು ಬರುವುದಿಲ್ಲ. ಈ ಯೋಜನೆಯ ಸತ್ಯಾನ್ವೇಷಣೆ ನಡೆಸಲು, ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ನೀರಾವರಿ ತಜ್ಞರು, ನೀರಾವರಿ ಹೋರಾಟಗಾರರು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಯೋಜನಾ ಸ್ಥಳಕ್ಕೆ ಕರೆದುಕೊಂಡು ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಾವಿರಾರು ಕೋಟಿ ರೂಪಾಯಿಗಳ ಈ ಯೋಜನೆ ಹಲವಾರು ವರ್ಷಗಳಿಂದ ಜನಸಾಮಾನ್ಯರಲ್ಲಿ ಮತ್ತು ಜನ ಪ್ರತಿನಿಧಿಗಳಲ್ಲಿ ಗೊಂದಲ ಮೂಡಿಸಿದೆ. ಎಲ್ಲಾ ಗೊಂದಲಗಳ ನಿವಾರಣೆಗೆ ಈ ಸತ್ಯಾನ್ವೇಷಣೆ ಅಧ್ಯಯನ ಪ್ರವಾಸ ಅನಿವಾರ್ಯವಾಗಿದೆ ಎಂದು ಒತ್ತಾಯಿಸಿದರು=</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಎತ್ತಿನ ಹೊಳೆಯ ಯೋಜನೆಯ ಸತ್ಯಾನ್ವೇಷಣೆಯಾಗಬೇಕೆಂದು ಒತ್ತಾಯಿಸಿ ಪ್ರಜಾಸೌಧದ ಆವರಣದಲ್ಲಿ ಪರಿಸರವಾದಿ ಚೌಡಪ್ಪ ಬುಧವಾರ ಬೆಳಗ್ಗೆಯಿಂದ ಸಂಜೆವರೆಗೆ ಒಂದು ದಿನದ ಮೌನ ಪ್ರತಿಭಟನೆ ನಡೆಸಿದರು.</p>.<p>ಎತ್ತಿನ ಹೊಳೆ ಎಂಬ ದೋಖಾ ಯೋಜನೆಯಿಂದ ಜಿಲ್ಲೆಗೆ ಒಂದು ಹಾನಿ ನೀರು ಬರುವುದಿಲ್ಲ. ಈ ಯೋಜನೆಯ ಸತ್ಯಾನ್ವೇಷಣೆ ನಡೆಸಲು, ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ನೀರಾವರಿ ತಜ್ಞರು, ನೀರಾವರಿ ಹೋರಾಟಗಾರರು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಯೋಜನಾ ಸ್ಥಳಕ್ಕೆ ಕರೆದುಕೊಂಡು ಹೋಗಲು ಜಿಲ್ಲಾಡಳಿತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಾವಿರಾರು ಕೋಟಿ ರೂಪಾಯಿಗಳ ಈ ಯೋಜನೆ ಹಲವಾರು ವರ್ಷಗಳಿಂದ ಜನಸಾಮಾನ್ಯರಲ್ಲಿ ಮತ್ತು ಜನ ಪ್ರತಿನಿಧಿಗಳಲ್ಲಿ ಗೊಂದಲ ಮೂಡಿಸಿದೆ. ಎಲ್ಲಾ ಗೊಂದಲಗಳ ನಿವಾರಣೆಗೆ ಈ ಸತ್ಯಾನ್ವೇಷಣೆ ಅಧ್ಯಯನ ಪ್ರವಾಸ ಅನಿವಾರ್ಯವಾಗಿದೆ ಎಂದು ಒತ್ತಾಯಿಸಿದರು=</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>