<p><strong>ಗೌರಿಬಿದನೂರು:</strong> ನಗರದ ಕರೇಕಲ್ಲಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹಾಯಕ ಅಡುಗೆ ಸಿಬ್ಬಂದಿ ಪತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಹಾಸ್ಟೆಲ್ನಲ್ಲಿ ಅಡುಗೆ ಸಿಬ್ಬಂದಿ ಮತ್ತು ಅವರ ಪತಿಗೂ ಉಳಿದುಕೊಳ್ಳಲು ಜಾಗ ನೀಡಲಾಗಿದೆ. ಅಡುಗೆ ಸಿಬ್ಬಂದಿ ಪತಿ ಖಲಂದರ್ ವಿದ್ಯಾರ್ಥಿಗಳ ಮೇಲೆ ದರ್ಪ ತೋರಲು ಪ್ರಾರಂಭಿಸಿದ್ದಾನೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.</p>.<p>ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ವ್ಯಕ್ತಿಗಳು ಪತ್ರಕರ್ತರು ಎಂದು ಹೇಳಿಕೊಂಡು ಮಂಗಳವಾರ ರಾತ್ರಿ ಗೋಡೆ ಹಾರಿ ಹಾಸ್ಟೆಲ್ ಪ್ರವೇಶಿಸಿ ಅಲ್ಲಿನ ಸಿಬ್ಬಂದಿಗೆ ಧಮ್ಕಿ ಹಾಕಿದ್ದಾರೆ.</p>.<p>20 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ನಲ್ಲಿ ತಡರಾತ್ರಿ ಕೆಲವರು ಅಲ್ಲಿನ ಶಿಕ್ಷಕರೊಂದಿಗೆ ಕುಳಿತು ಮಾತನಾಡುತ್ತಿರುವ ವಿಡಿಯೊಗಳ ಸಹ ಹರಿದಾಡುತ್ತಿವೆ. </p>.<p>ಹಾಸ್ಟೆಲ್ಗೆ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ. ಆದರೆ ಹೊರಗಿನವರಿಗೆ ಮುಕ್ತ ಪ್ರವೇಶ ನೀಡಿರುವುದು ಹಾಗೂ ಇಲ್ಲಿ ಸಿಸಿ ಟಿವಿ ಕ್ಯಾಮೆರಾಗಳು ಇಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಭದ್ರ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ವಾರ್ಡನ್ ನವೀನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿದ್ಯಾರ್ಥಿಗೆ ಅಡುಗೆ ಸಿಬ್ಬಂದಿ ಪತಿ ಥಳಿಸಿರುವ ಘಟನೆಯ ವಿಡಿಯೊ ಎರಡು ತಿಂಗಳ ಹಿಂದೆ ನಡೆದಿರುವುದು. ಈಗ ನನ್ನ ಗಮನಕ್ಕೆ ಬಂದಿದೆ. ರಾತ್ರಿ ಸಹ ಇಬ್ಬರು ವ್ಯಕ್ತಿಗಳು ಹಾಸ್ಟೆಲ್ ನ ಕಾಂಪೌಂಡ್ ಹಾರಿ ಬಂದು ನಾವು ಪತ್ರಕರ್ತರು ಎಂದು ಹೇಳಿಕೊಂಡು ಹಾಸ್ಟೆಲ್ ತರಗತಿಗಳನ್ನು ಪರಿಶೀಲಿಸಿದರು. ಅವರು ಪತ್ರಕರ್ತರೋ ಅಲ್ಲವೋ ನನಗೆ ಸರಿಯಾದ ಮಾಹಿತಿಯಿಲ್ಲ. ಇದನ್ನು ಮೇಲಧಿಕಾರಿಗಳ ಗಮನಕ್ಕೆ ತಂದು, ಪೊಲೀಸರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಅರವಿಂದ್ ಭೇಟಿ ನೀಡಿದ್ದರು. ಹಾಸ್ಟೆಲ್ ಪ್ರಾರಂಭವಾಗಿ 3 ತಿಂಗಳು ಕಳೆದರು ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲ. ಸಿಸಿ ಟಿವಿ ಕ್ಯಾಮೆರಾ, ಬಯೊ ಮೆಟ್ರಿಕ್ ಇಲ್ಲ. ಯಾವುದೇ ಭದ್ರತೆ ಇಲ್ಲ. ರಾತ್ರಿ ವೇಳೆ ರಕ್ಷಣಾ ಸಿಬ್ಬಂದಿ ಇಲ್ಲ ಎಂದು ವಾರ್ಡನ್ನನ್ನು ತರಾಟೆಗೆ ತೆಗೆದುಕೊಂಡರು.</p>.<p>ಅಪರಿಚಿತರು ಬಂದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲು ವಾರ್ಡನ್ಗೆ ಸೂಚಿಸಿದರು.</p>.<p>ಉಪ ತಹಶೀಲ್ದಾರ್ ಆಶಾ, ಆರ್ಐ ಖಾದರ್, ವಿ.ಎ ಅಮರ್ ನಾರಾಯಣ, ವಾರ್ಡನ್ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಕರೇಕಲ್ಲಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹಾಯಕ ಅಡುಗೆ ಸಿಬ್ಬಂದಿ ಪತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಹಾಸ್ಟೆಲ್ನಲ್ಲಿ ಅಡುಗೆ ಸಿಬ್ಬಂದಿ ಮತ್ತು ಅವರ ಪತಿಗೂ ಉಳಿದುಕೊಳ್ಳಲು ಜಾಗ ನೀಡಲಾಗಿದೆ. ಅಡುಗೆ ಸಿಬ್ಬಂದಿ ಪತಿ ಖಲಂದರ್ ವಿದ್ಯಾರ್ಥಿಗಳ ಮೇಲೆ ದರ್ಪ ತೋರಲು ಪ್ರಾರಂಭಿಸಿದ್ದಾನೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.</p>.<p>ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ವ್ಯಕ್ತಿಗಳು ಪತ್ರಕರ್ತರು ಎಂದು ಹೇಳಿಕೊಂಡು ಮಂಗಳವಾರ ರಾತ್ರಿ ಗೋಡೆ ಹಾರಿ ಹಾಸ್ಟೆಲ್ ಪ್ರವೇಶಿಸಿ ಅಲ್ಲಿನ ಸಿಬ್ಬಂದಿಗೆ ಧಮ್ಕಿ ಹಾಕಿದ್ದಾರೆ.</p>.<p>20 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ನಲ್ಲಿ ತಡರಾತ್ರಿ ಕೆಲವರು ಅಲ್ಲಿನ ಶಿಕ್ಷಕರೊಂದಿಗೆ ಕುಳಿತು ಮಾತನಾಡುತ್ತಿರುವ ವಿಡಿಯೊಗಳ ಸಹ ಹರಿದಾಡುತ್ತಿವೆ. </p>.<p>ಹಾಸ್ಟೆಲ್ಗೆ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ. ಆದರೆ ಹೊರಗಿನವರಿಗೆ ಮುಕ್ತ ಪ್ರವೇಶ ನೀಡಿರುವುದು ಹಾಗೂ ಇಲ್ಲಿ ಸಿಸಿ ಟಿವಿ ಕ್ಯಾಮೆರಾಗಳು ಇಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಭದ್ರ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ವಾರ್ಡನ್ ನವೀನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿದ್ಯಾರ್ಥಿಗೆ ಅಡುಗೆ ಸಿಬ್ಬಂದಿ ಪತಿ ಥಳಿಸಿರುವ ಘಟನೆಯ ವಿಡಿಯೊ ಎರಡು ತಿಂಗಳ ಹಿಂದೆ ನಡೆದಿರುವುದು. ಈಗ ನನ್ನ ಗಮನಕ್ಕೆ ಬಂದಿದೆ. ರಾತ್ರಿ ಸಹ ಇಬ್ಬರು ವ್ಯಕ್ತಿಗಳು ಹಾಸ್ಟೆಲ್ ನ ಕಾಂಪೌಂಡ್ ಹಾರಿ ಬಂದು ನಾವು ಪತ್ರಕರ್ತರು ಎಂದು ಹೇಳಿಕೊಂಡು ಹಾಸ್ಟೆಲ್ ತರಗತಿಗಳನ್ನು ಪರಿಶೀಲಿಸಿದರು. ಅವರು ಪತ್ರಕರ್ತರೋ ಅಲ್ಲವೋ ನನಗೆ ಸರಿಯಾದ ಮಾಹಿತಿಯಿಲ್ಲ. ಇದನ್ನು ಮೇಲಧಿಕಾರಿಗಳ ಗಮನಕ್ಕೆ ತಂದು, ಪೊಲೀಸರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.</p>.<p>ಸ್ಥಳಕ್ಕೆ ತಹಶೀಲ್ದಾರ್ ಅರವಿಂದ್ ಭೇಟಿ ನೀಡಿದ್ದರು. ಹಾಸ್ಟೆಲ್ ಪ್ರಾರಂಭವಾಗಿ 3 ತಿಂಗಳು ಕಳೆದರು ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲ. ಸಿಸಿ ಟಿವಿ ಕ್ಯಾಮೆರಾ, ಬಯೊ ಮೆಟ್ರಿಕ್ ಇಲ್ಲ. ಯಾವುದೇ ಭದ್ರತೆ ಇಲ್ಲ. ರಾತ್ರಿ ವೇಳೆ ರಕ್ಷಣಾ ಸಿಬ್ಬಂದಿ ಇಲ್ಲ ಎಂದು ವಾರ್ಡನ್ನನ್ನು ತರಾಟೆಗೆ ತೆಗೆದುಕೊಂಡರು.</p>.<p>ಅಪರಿಚಿತರು ಬಂದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲು ವಾರ್ಡನ್ಗೆ ಸೂಚಿಸಿದರು.</p>.<p>ಉಪ ತಹಶೀಲ್ದಾರ್ ಆಶಾ, ಆರ್ಐ ಖಾದರ್, ವಿ.ಎ ಅಮರ್ ನಾರಾಯಣ, ವಾರ್ಡನ್ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>