ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಬಿದನೂರು: ಮಂದಿರ, ಮಸೀದಿಗಳಿಗೆ ಬೀಗ

Last Updated 22 ಮಾರ್ಚ್ 2020, 13:09 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರದ ವ್ಯಕ್ತಿಯೊಬ್ಬರಿಗೆ ಕೋವಿಡ್‌–19 ಸೋಂಕು ತಗುಲಿದ್ದು ಪತ್ತೆಯಾದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಭಾನುವಾರ ನಗರಸಭೆ ಅಧಿಕಾರಿಗಳು ಮಸೀದಿ, ದೇವಸ್ಥಾನ ಮತ್ತು ಚರ್ಚ್‌ಗಳಿಗೆ ಬೀಗ ಹಾಕಿಸಿದರು.

ನಗರಸಭೆ ಆಯುಕ್ತ ಜಿ.ಎನ್.ಚಲಪತಿ ನೇತೃತ್ವದ ಅಧಿಕಾರಿಗಳ ತಂಡ ನಗರದಲ್ಲಿನ 12 ಮಸೀದಿಗಳು, 18 ದೇವಸ್ಥಾನಗಳು ಹಾಗೂ ನಾಲ್ಕು ಚರ್ಚ್‌ಗಳ ಸುತ್ತ ಭಾನುವಾರ ಸೋಂಕು ನಾಶಕ ದ್ರಾವಣ ಸಿಂಪಡಿಸಿ, ಮುಂದಿನ ಆದೇಶದವರೆಗೂ ಬಾಗಿಲು ತೆರೆಯದಂತೆ ಸೂಚಿಸಿದರು.

ಕೋವಿಡ್‌–19 ಸೋಂಕಿತರ ಸಂಪರ್ಕಕ್ಕೆ ಬಂದ ಶಂಕೆಯ ಮೇಲೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆತಂದಿದ್ದ ಸುಮಾರು 20 ಜನರನ್ನು ಆಸ್ಪತ್ರೆಗೆ ಬಿಡುಗಡೆ ಮಾಡಿ ಮನೆ ಕಳುಹಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳು 14 ದಿನಗಳ ಕಾಲ ಇತರರೊಂದಿಗೆ ಬೆರೆಯದಂತೆ ಮನೆಯಲ್ಲಿಯೇ ಗೃಹ ಬಂಧನದಲ್ಲಿ ಇರುವುವಂತೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT