<p><strong>ಗೌರಿಬಿದನೂರು:</strong> ತಾಲ್ಲೂಕಿನ ತೊಂಡೇಬಾವಿ ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ವಸತಿ ರಹಿತರಿಗೆ ನಿವೇಶನ ಹಂಚಿಕೆ ಕುರಿತು ಗ್ರಾಮಸಭೆ ಹಮ್ಮಿಕೊಳ್ಳಲಾಯಿತು.</p>.<p>ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಮಾತನಾಡಿ, ‘ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನ ಪ್ರತಿಯೊಬ್ಬರೂ ನಿವೇಶನ ಮತ್ತು ಮನೆಗಾಗಿ ಮನವಿ ಪತ್ರಗಳನ್ನು ಸಲ್ಲಿಸುತ್ತಿದ್ದರು. ದಶಕಗಳಿಂದ ನಿವೇಶನ ವಂಚಿತರಾಗಿರುವ ಕುಟುಂಬಗಳ ಪಟ್ಟಿ ಸಿದ್ಧಪಡಿಸಿ, ಅವರಿಗೆ ಹಂತಹಂತವಾಗಿ ನಿವೇಶನ ವಿತರಿಸುವ ಯೋಜನೆಯನ್ನು ತಾಲ್ಲೂಕು ಆಡಳಿತ ರೂಪಿಸಿದೆ ಎಂದರು.</p>.<p>ಈ ಪಂಚಾಯಿತಿಯಲ್ಲಿ ಈಗಾಗಲೇ ಆನ್ಲೈನ್ ಮೂಲಕ ಸ್ವೀಕೃತವಾದ 208 ಅರ್ಜಿಗಳಲ್ಲಿ 98 ನಿವೇಶನಗಳ ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಅರ್ಜಿಗಳು ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದು, ಮರು ಪರಿಶೀಲಿಸಲಾಗುವುದು ಎಂದರು.</p>.<p>ತಾಲ್ಲೂಕಿನಾದ್ಯಂತ ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಲು ಮತ್ತು ಲಭ್ಯವಿರುವ ಸರ್ಕಾರಿ ಜಾಗಗಳನ್ನು ಗುರುತಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಜಿ.ಕೆ.ಹೊನ್ನಯ್ಯ ಮಾತನಾಡಿ, ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಗ್ರಾಮಸ್ಥರ ಸಮ್ಮುಖದಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲಾಗುವುದು ಎಂದರು.</p>.<p>ಈ ಸಭೆಯಲ್ಲಿ ಆಡಳಿತಾಧಿಕಾರಿ ಮುನಿರತ್ನಮ್ಮ, ತಾ.ಪಂ ವ್ಯವಸ್ಥಾಪಕ ಬಾಲಕೃಷ್ಣ, ಪಿಡಿಒ ಪೃಥ್ವಿಭಾ, ಚಿಮುಲ್ ನಿರ್ದೇಶಕ ಜೆ.ಕಾಂತರಾಜ್ ಹಾಗೂ ಫಲಾನುಭವಿಗಳು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-432267122</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ತಾಲ್ಲೂಕಿನ ತೊಂಡೇಬಾವಿ ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ವಸತಿ ರಹಿತರಿಗೆ ನಿವೇಶನ ಹಂಚಿಕೆ ಕುರಿತು ಗ್ರಾಮಸಭೆ ಹಮ್ಮಿಕೊಳ್ಳಲಾಯಿತು.</p>.<p>ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಮಾತನಾಡಿ, ‘ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನ ಪ್ರತಿಯೊಬ್ಬರೂ ನಿವೇಶನ ಮತ್ತು ಮನೆಗಾಗಿ ಮನವಿ ಪತ್ರಗಳನ್ನು ಸಲ್ಲಿಸುತ್ತಿದ್ದರು. ದಶಕಗಳಿಂದ ನಿವೇಶನ ವಂಚಿತರಾಗಿರುವ ಕುಟುಂಬಗಳ ಪಟ್ಟಿ ಸಿದ್ಧಪಡಿಸಿ, ಅವರಿಗೆ ಹಂತಹಂತವಾಗಿ ನಿವೇಶನ ವಿತರಿಸುವ ಯೋಜನೆಯನ್ನು ತಾಲ್ಲೂಕು ಆಡಳಿತ ರೂಪಿಸಿದೆ ಎಂದರು.</p>.<p>ಈ ಪಂಚಾಯಿತಿಯಲ್ಲಿ ಈಗಾಗಲೇ ಆನ್ಲೈನ್ ಮೂಲಕ ಸ್ವೀಕೃತವಾದ 208 ಅರ್ಜಿಗಳಲ್ಲಿ 98 ನಿವೇಶನಗಳ ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಅರ್ಜಿಗಳು ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದು, ಮರು ಪರಿಶೀಲಿಸಲಾಗುವುದು ಎಂದರು.</p>.<p>ತಾಲ್ಲೂಕಿನಾದ್ಯಂತ ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಲು ಮತ್ತು ಲಭ್ಯವಿರುವ ಸರ್ಕಾರಿ ಜಾಗಗಳನ್ನು ಗುರುತಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಜಿ.ಕೆ.ಹೊನ್ನಯ್ಯ ಮಾತನಾಡಿ, ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಗ್ರಾಮಸ್ಥರ ಸಮ್ಮುಖದಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲಾಗುವುದು ಎಂದರು.</p>.<p>ಈ ಸಭೆಯಲ್ಲಿ ಆಡಳಿತಾಧಿಕಾರಿ ಮುನಿರತ್ನಮ್ಮ, ತಾ.ಪಂ ವ್ಯವಸ್ಥಾಪಕ ಬಾಲಕೃಷ್ಣ, ಪಿಡಿಒ ಪೃಥ್ವಿಭಾ, ಚಿಮುಲ್ ನಿರ್ದೇಶಕ ಜೆ.ಕಾಂತರಾಜ್ ಹಾಗೂ ಫಲಾನುಭವಿಗಳು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-16-432267122</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>