<p><strong>ಗೌರಿಬಿದನೂರು:</strong> ತಾಲ್ಲೂಕಿನ ವಾಟದಹೊಸಹಳ್ಳಿ ಕೆರೆಯಿಂದ ನಗರಕ್ಕೆ ನೀರು ಹರಿಸುವ ಯೋಜನೆಗೆ ಜು.26ರಂದು ಗೊಟಕನಾಪುರ ಕೆರೆ ಬಳಿ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ತಿಳಿಸಿದರು.</p>.<p>ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ವೇಳೆ ನಗರದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತಿತ್ತು. ಇದನ್ನು ಮನಗಂಡು, ಸರ್ಕಾರದ ಮೇಲೆ ಒತ್ತಡ ಹಾಕಿ ಈ ಯೋಜನೆಯನ್ನು ರೂಪಿಸಲಾಗಿದೆ. ಉತ್ತಮ ಯೋಜನೆಗೆ ಅಡ್ಡಿಪಡಿಸಿ, ಪ್ರತಿಭಟನೆ, ಪಂಜಿನ ಮೆರವಣಿಗೆ ಮಾಡಿಸಿದ್ದಾರೆ ಎಂದು ದೂರಿದರು.</p>.<p>ನಗರದ ಜನರ ಕುಡಿಯುವ ನೀರಿಗಾಗಿ, ಅಮೃತ್ 2 ಯೋಜನೆ ಅಡಿಯಲ್ಲಿ ₹ 65 ಕೋಟಿ ಅನುದಾನ ತಂದು ಯೋಜನೆ ರೂಪಿಸಲಾಗಿದೆ. ಎತ್ತಿನಹೊಳೆ ನೀರನ್ನು ತಂದು ವಾಟದಹೊಸಹಳ್ಳಿ ಕೆರೆಗೆ ತುಂಬಿಸದೆ ನಗರಕ್ಕೆ ವಾಟದಹೊಸಹಳ್ಳಿ ಕೆರೆಯ ನೀರು ತೆಗೆದುಕೊಂಡು ಹೋಗುವುದಿಲ್ಲ ಎಂದರು.</p>.<p>ವಾಟದಹೊಸಹಳ್ಳಿ ಭಾಗದ ರೈತರಿಗೆ ಈ ಬಗ್ಗೆ ಯಾವುದೇ ಅನುಮಾನ ಬೇಡ. ಎತ್ತಿನ ಹೊಳೆ ನೀರನ್ನು ಕೆರೆಗೆ ಹರಿಸದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.</p>.<p>ಎತ್ತಿನ ಹೊಳೆ ನೀರನ್ನು ಕೆರೆಗೆ ತುಂಬಿಸಿ ಅದರಲ್ಲಿ ಅರ್ಧದಷ್ಟು ನೀರನ್ನು ಮಾತ್ರ ನಗರಕ್ಕೆ ಹರಿಸಲಾಗುವುದು. ವಾಟದಹೊಸಹಳ್ಳಿ ಸುತ್ತಮುತ್ತಲಿನ ಹಳ್ಳಿಗಳಿಗೆ ಮತ್ತು ಹುದುಗೂರು ಸುತ್ತಮುತ್ತಲಿನ 8 ಹಳ್ಳಿಗಳಿಗೆ ಈ ನೀರನ್ನು ಹರಿಸಲಾಗುವುದು. ಆದರೆ ಉತ್ತಮ ಕಾರ್ಯಕ್ಕೆ ಕೆಲವು ರಾಜಕಾರಣಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದರು.</p>.<p>ವಾಟದಹೊಸಹಳ್ಳಿ ಕೆರೆ, ಕಲ್ಲೂಡಿ ಕೆರೆ ಮತ್ತು ಗೊಟಕನಾಪುರ ಕೆರೆಗಳಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಿ, ಅಲ್ಲಿನ ನೀರನ್ನು ನಗರಕ್ಕೆ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ತಾಲ್ಲೂಕಿನ ವಾಟದಹೊಸಹಳ್ಳಿ ಕೆರೆಯಿಂದ ನಗರಕ್ಕೆ ನೀರು ಹರಿಸುವ ಯೋಜನೆಗೆ ಜು.26ರಂದು ಗೊಟಕನಾಪುರ ಕೆರೆ ಬಳಿ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ತಿಳಿಸಿದರು.</p>.<p>ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ವೇಳೆ ನಗರದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತಿತ್ತು. ಇದನ್ನು ಮನಗಂಡು, ಸರ್ಕಾರದ ಮೇಲೆ ಒತ್ತಡ ಹಾಕಿ ಈ ಯೋಜನೆಯನ್ನು ರೂಪಿಸಲಾಗಿದೆ. ಉತ್ತಮ ಯೋಜನೆಗೆ ಅಡ್ಡಿಪಡಿಸಿ, ಪ್ರತಿಭಟನೆ, ಪಂಜಿನ ಮೆರವಣಿಗೆ ಮಾಡಿಸಿದ್ದಾರೆ ಎಂದು ದೂರಿದರು.</p>.<p>ನಗರದ ಜನರ ಕುಡಿಯುವ ನೀರಿಗಾಗಿ, ಅಮೃತ್ 2 ಯೋಜನೆ ಅಡಿಯಲ್ಲಿ ₹ 65 ಕೋಟಿ ಅನುದಾನ ತಂದು ಯೋಜನೆ ರೂಪಿಸಲಾಗಿದೆ. ಎತ್ತಿನಹೊಳೆ ನೀರನ್ನು ತಂದು ವಾಟದಹೊಸಹಳ್ಳಿ ಕೆರೆಗೆ ತುಂಬಿಸದೆ ನಗರಕ್ಕೆ ವಾಟದಹೊಸಹಳ್ಳಿ ಕೆರೆಯ ನೀರು ತೆಗೆದುಕೊಂಡು ಹೋಗುವುದಿಲ್ಲ ಎಂದರು.</p>.<p>ವಾಟದಹೊಸಹಳ್ಳಿ ಭಾಗದ ರೈತರಿಗೆ ಈ ಬಗ್ಗೆ ಯಾವುದೇ ಅನುಮಾನ ಬೇಡ. ಎತ್ತಿನ ಹೊಳೆ ನೀರನ್ನು ಕೆರೆಗೆ ಹರಿಸದಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.</p>.<p>ಎತ್ತಿನ ಹೊಳೆ ನೀರನ್ನು ಕೆರೆಗೆ ತುಂಬಿಸಿ ಅದರಲ್ಲಿ ಅರ್ಧದಷ್ಟು ನೀರನ್ನು ಮಾತ್ರ ನಗರಕ್ಕೆ ಹರಿಸಲಾಗುವುದು. ವಾಟದಹೊಸಹಳ್ಳಿ ಸುತ್ತಮುತ್ತಲಿನ ಹಳ್ಳಿಗಳಿಗೆ ಮತ್ತು ಹುದುಗೂರು ಸುತ್ತಮುತ್ತಲಿನ 8 ಹಳ್ಳಿಗಳಿಗೆ ಈ ನೀರನ್ನು ಹರಿಸಲಾಗುವುದು. ಆದರೆ ಉತ್ತಮ ಕಾರ್ಯಕ್ಕೆ ಕೆಲವು ರಾಜಕಾರಣಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದರು.</p>.<p>ವಾಟದಹೊಸಹಳ್ಳಿ ಕೆರೆ, ಕಲ್ಲೂಡಿ ಕೆರೆ ಮತ್ತು ಗೊಟಕನಾಪುರ ಕೆರೆಗಳಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಿ, ಅಲ್ಲಿನ ನೀರನ್ನು ನಗರಕ್ಕೆ ಸರಬರಾಜು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>