ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಂಗಲ್ಯ ಸರ ಕಳವು

Last Updated 8 ನವೆಂಬರ್ 2020, 3:35 IST
ಅಕ್ಷರ ಗಾತ್ರ

ಗೌರಿಬಿದನೂರು: ದಾರಿ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಹೋಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವನಿತಾ(27) ಸರ ಕಳೆದು ಕೊಂಡವರು. ಇಡಗೂರು-ಭೀಮನಹಳ್ಳಿ ರಸ್ತೆಯ ಜಮೀನಿನ ಬಳಿ ಮೇಕೆ ಸಾಕಾಣಿಕೆ ಮಾಡುತ್ತಿದ್ದ ಮಾವ ನಾಗಪ್ಪನಿಗೆ ಊಟ ಕೊಟ್ಟು ಹಿಂತಿರುಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಇಡಗೂರಿಗೆ ಹೋಗುವ ದಾರಿ ಯಾವುದು ಎಂದು ಅವರನ್ನು ಕೇಳಿದ್ದಾರೆ.

ಸ್ವಲ್ಪ ದೂರ ಹೋಗಿ ಮತ್ತೆ ಹಿಂತಿರುಗಿ ಬಂದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸಿಪಿಐ ಎಸ್. ರವಿ, ಪಿಎಸ್‌ಐ ಮೋಹನ್ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT