ಕಳೆದ ಒಂದು ವಾರದಿಂದ ಸುರಿದ ಜಿಟಿಜಿಟಿ ಮಳೆಯಿಂದ ಸಾಕಾಗಿದ್ದ ಜನತೆಗೆ ಸೋಮವಾರ ರಾತ್ರಿ ಮತ್ತು ಮಂಗಳವಾರ ಸುರಿದ ಮಳೆಯಿಂದಾಗಿ ಮತ್ತೆ ಸಂಕಷ್ಟ ಎದುರಾಗಿದೆ. ಈಗಾಗಲೇ ಗ್ರಾಮೀಣ ಭಾಗದ ಜನರು ಮಳೆಯಿಂದಾಗಿ ತತ್ತರಿಸಿದ್ದು ಜಾನುವಾರುಗಳಿಗೆ ಮೇವಿಲ್ಲದೆ ಪರಿತಪಿಸುವಂತಾಗಿದೆ. ಮತ್ತೊಂದೆಡೆ ಫಸಲಿಗೆ ಬಂದಿರುವ ರಾಗಿ, ಜೋಳ, ನೆಲಗಡಲೆ ಸೇರಿದಂತೆ ಇನ್ನಿತರ ಬೆಳೆಗಳು ಮಳೆಯ ತೀವ್ರತೆಗೆ ಭೂಮಿಯಲ್ಲೆ ಮೊಳಕೆಯೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ರೈತಾಪಿ ವರ್ಗದ ಜನತೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಪರಿತಪಿಸುವಂತಾಗಿದೆ.