ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಬಿದನೂರಿನಲ್ಲಿ ಉತ್ತಮ‌ ಮಳೆ

Last Updated 17 ನವೆಂಬರ್ 2021, 3:08 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರ ಸೇರಿದಂತೆ ‌ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ಸೋಮವಾರ ರಾತ್ರಿ‌ ಹಾಗೂ ಮಂಗಳವಾರ ಉತ್ತಮ‌ ಮಳೆಯಾಗಿದ್ದು, ಇದರಿಂದ ಪಿನಾಕಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕಳೆದ ಒಂದು‌ ವಾರದಿಂದ ಸುರಿದ ಜಿಟಿಜಿಟಿ ಮಳೆಯಿಂದ ಸಾಕಾಗಿದ್ದ ಜನತೆಗೆ ಸೋಮವಾರ ರಾತ್ರಿ ಮತ್ತು‌ ಮಂಗಳವಾರ ಸುರಿದ ಮಳೆಯಿಂದಾಗಿ ಮತ್ತೆ ಸಂಕಷ್ಟ ಎದುರಾಗಿದೆ. ಈಗಾಗಲೇ ಗ್ರಾಮೀಣ ಭಾಗದ ಜನರು ಮಳೆಯಿಂದಾಗಿ ತತ್ತರಿಸಿದ್ದು ಜಾನುವಾರುಗಳಿಗೆ ‌ಮೇವಿಲ್ಲದೆ ಪರಿತಪಿಸುವಂತಾಗಿದೆ. ಮತ್ತೊಂದೆಡೆ ಫಸಲಿಗೆ ಬಂದಿರುವ ರಾಗಿ, ಜೋಳ, ನೆಲಗಡಲೆ ಸೇರಿದಂತೆ ಇನ್ನಿತರ ಬೆಳೆಗಳು ಮಳೆಯ ತೀವ್ರತೆಗೆ ಭೂಮಿಯಲ್ಲೆ ಮೊಳಕೆಯೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ರೈತಾಪಿ ವರ್ಗದ ಜನತೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಪರಿತಪಿಸುವಂತಾಗಿದೆ‌.

ಮಂಗಳವಾರ ಸಂಜೆ‌ ನಗರದ ಸುತ್ತಲೂ ಸುರಿದ ಉತ್ತಮ ಮಳೆಯಿಂದಾಗಿ ಶಾಲಾಕಾಲೇಜುಗಳಿಂದ ಗ್ರಾಮೀಣ ಪ್ರದೇಶಕ್ಕೆ ತೆರಳುವ ವಿದ್ಯಾರ್ಥಿಗಳು ತಮ್ಮ ಮಾರ್ಗದ ಬಸ್ ಸಂಪರ್ಕಿಸಲು ಮಳೆಯಲ್ಲೆ ಹೆಜ್ಜೆ‌ ಹಾಕಿದರು. ಇನ್ನು ದ್ವಿಚಕ್ರ ವಾಹನಗಳಲ್ಲಿ ‌ತೆರಳುವವರು‌ ಮಳೆಯಲ್ಲೆ ನೆನೆದು ಮನೆ ಸೇರುವಂತಿದ್ದರು.

ಕಳೆದ ಎರಡು ದಿನಗಳಿಂದ ತಾಲ್ಲೂಕಿನ ‌ವಿವಿಧೆಡೆಗಳಲ್ಲಿ ಸುರಿಯುತ್ತಿರುವ ಉತ್ತಮ‌ ಮಳೆಯಿಂದಾಗಿ ಮಳೆ ನೀರಿನಿಂದ ತುಂಬಿರುವ ಜಲಮೂಲಗಳಿಂದ ಹೆಚ್ಚಿನ ನೀರು‌ ಹೊರಬರುತ್ತಿದ್ದು ಇದರಿಂದಾಗಿ ಪಿನಾಕಿನಿ ‌ನದಿಯಲ್ಲಿ‌ ನೀರಿನ ಹರಿವು‌ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT