‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಎಚ್.ಸೋಮಶೇಖರಪ್ಪ ಅವರು, ‘2017ರಲ್ಲಿ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆಯಾಗದ ಕಾರಣಕ್ಕೆ ಹುಸೇನ್ ಬೀ ಅವರ ಪಡಿತರ ಚೀಟಿ ರದ್ದಾಗಿದೆ. ಅದಕ್ಕಾಗಿ ಅವರು ಕಳೆದ ಮೂರು ವರ್ಷಗಳಿಂದ ಅಲೆದಾಡುತ್ತಿರುವ ವಿಚಾರ ಪತ್ರಿಕೆ ಮೂಲಕ ಗಮನಕ್ಕೆ ಬಂದಿದೆ’ ಎಂದು ಹೇಳಿದರು.