<p>ಗೌರಿಬಿದನೂರು: ನಗರದ ಮುನೇಶ್ವರ ಬಡಾವಣೆಯಲ್ಲಿರುವ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೇಣಿಕ್ ಮಾತನಾಡಿ, ಕಣ್ಣು ಮನುಷ್ಯನಲ್ಲಿರುವ ಪ್ರಮುಖವಾದ ಅಂಗ. ಕಣ್ಣಿನ ದೃಷ್ಟಿ ಕಳೆದುಕೊಂಡರೆ ಅವರ ಜೀವನ ಪರ್ಯಂತ ಕತ್ತಲಲ್ಲಿ ಕಳೆಯಬೇಕಾದ ಪರಿಸ್ಥಿತಿ ಬರುತ್ತದೆ. ಜನರು ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸದಸ್ಯ ನಂಜೇಗೌಡ ಮಾತನಾಡಿ, ಬಡ ಜನರ ಕಣ್ಣಿನ ಆರೋಗ್ಯವನ್ನು ತಪಾಸಣೆ ಮಾಡಲು ಸ್ಥಳೀಯ ಲಯನ್ಸ್ ಸಂಸ್ಥೆ ದಾನಿಗಳ ನೆರವಿನಿಂದ ಕಣ್ಣಿನ ತಪಾಸಣಾ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದನ್ನು ಸಾರ್ವಜನಿಕರು ಉಪಯೋಗಿಸಿಕೊಂಡು ತಮ್ಮ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.</p>.<p>ಶಿಬಿರದಲ್ಲಿ 93 ಮಂದಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. 36 ಜನರಲ್ಲಿ ಕಣ್ಣಿನ ದೃಷ್ಟಿ ದೋಷ ಕಂಡು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗುತ್ತದೆ. ಇಸ್ತೂರಿ ಸತೀಶ್ ಕುಮಾರ್, ಸುರಾಜ್, ದಸ್ತಗಿರಿಸಾಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-16-900447510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ನಗರದ ಮುನೇಶ್ವರ ಬಡಾವಣೆಯಲ್ಲಿರುವ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೇಣಿಕ್ ಮಾತನಾಡಿ, ಕಣ್ಣು ಮನುಷ್ಯನಲ್ಲಿರುವ ಪ್ರಮುಖವಾದ ಅಂಗ. ಕಣ್ಣಿನ ದೃಷ್ಟಿ ಕಳೆದುಕೊಂಡರೆ ಅವರ ಜೀವನ ಪರ್ಯಂತ ಕತ್ತಲಲ್ಲಿ ಕಳೆಯಬೇಕಾದ ಪರಿಸ್ಥಿತಿ ಬರುತ್ತದೆ. ಜನರು ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸದಸ್ಯ ನಂಜೇಗೌಡ ಮಾತನಾಡಿ, ಬಡ ಜನರ ಕಣ್ಣಿನ ಆರೋಗ್ಯವನ್ನು ತಪಾಸಣೆ ಮಾಡಲು ಸ್ಥಳೀಯ ಲಯನ್ಸ್ ಸಂಸ್ಥೆ ದಾನಿಗಳ ನೆರವಿನಿಂದ ಕಣ್ಣಿನ ತಪಾಸಣಾ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದನ್ನು ಸಾರ್ವಜನಿಕರು ಉಪಯೋಗಿಸಿಕೊಂಡು ತಮ್ಮ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.</p>.<p>ಶಿಬಿರದಲ್ಲಿ 93 ಮಂದಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. 36 ಜನರಲ್ಲಿ ಕಣ್ಣಿನ ದೃಷ್ಟಿ ದೋಷ ಕಂಡು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗುತ್ತದೆ. ಇಸ್ತೂರಿ ಸತೀಶ್ ಕುಮಾರ್, ಸುರಾಜ್, ದಸ್ತಗಿರಿಸಾಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-16-900447510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>