<p>ಗೌರಿಬಿದನೂರು: ನಗರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಗರದ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿ ಶಿಥಿಲವಾದ ಎರಡು ನೀರಿನ ಟ್ಯಾಂಕ್ಗಳನ್ನು ಕೆಡವಿ ನಗರೋತ್ಥಾನ ಯೋಜನೆಯಡಿ ಸುಮಾರು ₹2.90 ಕೋಟಿ ವೆಚ್ಚದಲ್ಲಿ ಹೊಸ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಗರಸಭೆ ಕಚೇರಿ ಹಿಂಭಾಗದಲ್ಲಿ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಎರಡು ಹೊಸ ಟ್ಯಾಂಕ್ಗಳನ್ನು ನೂತನ ತಂತ್ರಜ್ಞಾನದೊಂದಿಗೆ ಕಟ್ಟಲಾಗುವುದು. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ನೀರು ನಗರಕ್ಕೆ ಬಂದಾಗ ಆ ನೀರನ್ನು ಸಂಗ್ರಹಿಸಿ ಪ್ರತಿ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು 5 ರಿಂದ 10 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ಗಳು ನಗರಕ್ಕೆ ಅವಶ್ಯಕವಾಗಿವೆ ಎಂದರು.</p>.<p>ನಗರಸಭೆ ಮಾಜಿ ಸದಸ್ಯ ಶ್ರೀಕಾಂತ್, ಶ್ರೀರಾಮಯ್ಯ, ಮುಖಂಡ ಬೈಪಾಸ್ ನಾಗರಾಜು, ಅಬೂಬೇಕರ್, ಜಗ್ಗಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-16-1366522659</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ನಗರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಗರದ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿ ಶಿಥಿಲವಾದ ಎರಡು ನೀರಿನ ಟ್ಯಾಂಕ್ಗಳನ್ನು ಕೆಡವಿ ನಗರೋತ್ಥಾನ ಯೋಜನೆಯಡಿ ಸುಮಾರು ₹2.90 ಕೋಟಿ ವೆಚ್ಚದಲ್ಲಿ ಹೊಸ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಗರಸಭೆ ಕಚೇರಿ ಹಿಂಭಾಗದಲ್ಲಿ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಎರಡು ಹೊಸ ಟ್ಯಾಂಕ್ಗಳನ್ನು ನೂತನ ತಂತ್ರಜ್ಞಾನದೊಂದಿಗೆ ಕಟ್ಟಲಾಗುವುದು. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ನೀರು ನಗರಕ್ಕೆ ಬಂದಾಗ ಆ ನೀರನ್ನು ಸಂಗ್ರಹಿಸಿ ಪ್ರತಿ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು 5 ರಿಂದ 10 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ಗಳು ನಗರಕ್ಕೆ ಅವಶ್ಯಕವಾಗಿವೆ ಎಂದರು.</p>.<p>ನಗರಸಭೆ ಮಾಜಿ ಸದಸ್ಯ ಶ್ರೀಕಾಂತ್, ಶ್ರೀರಾಮಯ್ಯ, ಮುಖಂಡ ಬೈಪಾಸ್ ನಾಗರಾಜು, ಅಬೂಬೇಕರ್, ಜಗ್ಗಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-16-1366522659</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>