<p><strong>ಗೌರಿಬಿದನೂರು:</strong> ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ಬಗ್ಗೆ ಜಾಗೃತಿ ಮೂಡಿಸಲಾಯಿತು. </p>.<p>ಇದೇ 12ರಿಂದ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ದ್ವಿಚಕ್ರ ವಾಹನ ಸವಾರಿ ಮಾಡಬೇಕು ಎಂಬುದಾಗಿ ಜಾಗೃತಿ ಮೂಡಿಸಿರುವ ಹೊರತಾಗಿಯೂ ಹಲವು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿರುವುದು ಕಂಡುಬಂದಿತು. ಅಂಥವರಿಗೆ ದಂಡ ವಿಧಿಸುವ ಮೂಲಕ ನಗರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದರು. </p>.<p>ನಗರ ಠಾಣೆ ಪಿಎಸ್ಐ ಗೋಪಾಲ್ ಮಾತನಾಡಿ, ಎಲ್ಲ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲನೆ ಮಾಡುವವರು ಮತ್ತು ಮುಂಬದಿ ಸೀಟಿನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕ ಸೀಟ್ ಬೆಲ್ಟ್ ಹಾಕಿಕೊಳ್ಳಲೇಬೇಕು. ಜೊತೆಗೆ ವಾಹನ ದಾಖಲೆ ಪತ್ರಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿದೆ. ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. </p>.<p>ಹೆಲ್ಮೆಟ್ ಧರಿಸದೆ ರಸ್ತೆಗೆ ಇಳಿದ ನೂರಕ್ಕೂ ಹೆಚ್ಚು ವಾಹನ ಸವಾರರಿಂದ ₹50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಯಿತು. </p>.<p>ಇದೇ ವೇಳೆ ನಗರ ಠಾಣೆ ಪಿಎಸ್ಐ ಲಲಿತಮ್ಮ, ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಗುಗ್ಗರಿ, ಸಿಬ್ಬಂದಿ ಹಾಜರಿದ್ದರು.</p>
<p><strong>ಗೌರಿಬಿದನೂರು:</strong> ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ಬಗ್ಗೆ ಜಾಗೃತಿ ಮೂಡಿಸಲಾಯಿತು. </p>.<p>ಇದೇ 12ರಿಂದ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ ದ್ವಿಚಕ್ರ ವಾಹನ ಸವಾರಿ ಮಾಡಬೇಕು ಎಂಬುದಾಗಿ ಜಾಗೃತಿ ಮೂಡಿಸಿರುವ ಹೊರತಾಗಿಯೂ ಹಲವು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿರುವುದು ಕಂಡುಬಂದಿತು. ಅಂಥವರಿಗೆ ದಂಡ ವಿಧಿಸುವ ಮೂಲಕ ನಗರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದರು. </p>.<p>ನಗರ ಠಾಣೆ ಪಿಎಸ್ಐ ಗೋಪಾಲ್ ಮಾತನಾಡಿ, ಎಲ್ಲ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲನೆ ಮಾಡುವವರು ಮತ್ತು ಮುಂಬದಿ ಸೀಟಿನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕ ಸೀಟ್ ಬೆಲ್ಟ್ ಹಾಕಿಕೊಳ್ಳಲೇಬೇಕು. ಜೊತೆಗೆ ವಾಹನ ದಾಖಲೆ ಪತ್ರಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿದೆ. ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. </p>.<p>ಹೆಲ್ಮೆಟ್ ಧರಿಸದೆ ರಸ್ತೆಗೆ ಇಳಿದ ನೂರಕ್ಕೂ ಹೆಚ್ಚು ವಾಹನ ಸವಾರರಿಂದ ₹50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಯಿತು. </p>.<p>ಇದೇ ವೇಳೆ ನಗರ ಠಾಣೆ ಪಿಎಸ್ಐ ಲಲಿತಮ್ಮ, ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಗುಗ್ಗರಿ, ಸಿಬ್ಬಂದಿ ಹಾಜರಿದ್ದರು.</p>