<p><strong>ಗೌರಿಬಿದನೂರು:</strong> ನಗರದ ಸರ್ಕಾರಿ ಕೋಟೆ ಪ್ರೌಢಶಾಲೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. </p>.<p>1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಜಿಲ್ಲೆಯ ಅತೀ ದೊಡ್ಡ ಶಾಲೆ ಎಂಬ ಕೀರ್ತಿಗೆ ಭಾಜನವಾದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಬೋಧನೆ ಮಾಡಿದರು. </p>.<p>ವಿದ್ಯಾರ್ಥಿಗಳಿಗೆ ಪಾಠ ಮಾಡುವ ಜೊತೆಗೆ ಶಿಕ್ಷಕರ ಹಾಜರಾತಿ, ಪರಿಶೀಲನೆ, ಸ್ವಚ್ಛತೆ, ವಿದ್ಯಾರ್ಥಿಗಳ ಸಮಸ್ಯೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. </p>.<p>ಹತ್ತನೇ ತರಗತಿಯಲ್ಲಿ ಓದುತ್ತಿರುವ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ಪ್ರಾರಂಭದಿಂದಲೇ <br> ಪಾಠ ಪ್ರವಚನಗಳ ಕಡೆ ಹೆಚ್ಚಿನ ಗಮನ ನೀಡುವ ಅಭ್ಯಾಸ ಮಾಡಬೇಕು ಎಂದು ತಿಳಿಹೇಳಿದರು. </p>.<p>ಇದರಿಂದ ಉತ್ತಮ ಫಲಿತಾಂಶ ಪಡೆಯಬಹುದು ಎಂದು ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದರು. ಪೋಷಕರಿಲ್ಲದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಕ್ಕಳಿಂದಲೇ ಮಾಹಿತಿ ಪಡೆದು, ಅವರ ಶೈಕ್ಷಣಿಕ ಅಭಿವೃದ್ಧಿಗೆ ಕಾಳಜಿ ವಹಿಸುವಂತೆ ಶಿಕ್ಷಕರಿಗೆ ತಿಳಿಸಿದರು. ಜೊತೆಗೆ ಮೌಲ್ಯಯುತ ಫಲಿತಾಂಶ ಹೆಚ್ಚಿಸಲು ಶಿಕ್ಷಕರಿಗೆ ಸಲಹೆ–ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಸರ್ಕಾರಿ ಕೋಟೆ ಪ್ರೌಢಶಾಲೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. </p>.<p>1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಜಿಲ್ಲೆಯ ಅತೀ ದೊಡ್ಡ ಶಾಲೆ ಎಂಬ ಕೀರ್ತಿಗೆ ಭಾಜನವಾದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಬೋಧನೆ ಮಾಡಿದರು. </p>.<p>ವಿದ್ಯಾರ್ಥಿಗಳಿಗೆ ಪಾಠ ಮಾಡುವ ಜೊತೆಗೆ ಶಿಕ್ಷಕರ ಹಾಜರಾತಿ, ಪರಿಶೀಲನೆ, ಸ್ವಚ್ಛತೆ, ವಿದ್ಯಾರ್ಥಿಗಳ ಸಮಸ್ಯೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. </p>.<p>ಹತ್ತನೇ ತರಗತಿಯಲ್ಲಿ ಓದುತ್ತಿರುವ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ಪ್ರಾರಂಭದಿಂದಲೇ <br> ಪಾಠ ಪ್ರವಚನಗಳ ಕಡೆ ಹೆಚ್ಚಿನ ಗಮನ ನೀಡುವ ಅಭ್ಯಾಸ ಮಾಡಬೇಕು ಎಂದು ತಿಳಿಹೇಳಿದರು. </p>.<p>ಇದರಿಂದ ಉತ್ತಮ ಫಲಿತಾಂಶ ಪಡೆಯಬಹುದು ಎಂದು ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದರು. ಪೋಷಕರಿಲ್ಲದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಕ್ಕಳಿಂದಲೇ ಮಾಹಿತಿ ಪಡೆದು, ಅವರ ಶೈಕ್ಷಣಿಕ ಅಭಿವೃದ್ಧಿಗೆ ಕಾಳಜಿ ವಹಿಸುವಂತೆ ಶಿಕ್ಷಕರಿಗೆ ತಿಳಿಸಿದರು. ಜೊತೆಗೆ ಮೌಲ್ಯಯುತ ಫಲಿತಾಂಶ ಹೆಚ್ಚಿಸಲು ಶಿಕ್ಷಕರಿಗೆ ಸಲಹೆ–ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>