ನಾಗರೀಕರ ನಿತ್ಯದ ಜೀವನಕ್ಕೆ ಅವಶ್ಯಕವಿರುವ ಅಗತ್ಯ ಸಾಮಗ್ರಿಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಪೂರೈಕೆ ಮಾಡಲಾಗುವುದು. ಇದರ ಜತೆಗೆ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಬದ್ಧರಾಗಿದ್ದೇವೆ. ದಯಮಾಡಿ ಯಾರೊಬ್ಬರೂ ಮನೆಯಿಂದ ಹೊರಗಡೆ ಬರದೆ ಸಾಮಾಜಿಕ ಅಂತರವನ್ನು ಕಾಪಾಡಬೇಕಾಗಿದೆ ಎಂದು ಬಾಲಕೃಷ್ಣ ಹೇಳಿದರು.