ಉತ್ಸವದ ಸಮಯದಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ವಿ.ಕೆ. ವಾಸುದೇವ್, ಉತ್ಸವವನ್ನು ಮೊದಲ ಬಾರಿ ಆಚರಿಸಲಾಗುತ್ತಿದೆ. ಜನದಟ್ಟಣೆ ಮತ್ತು ವಾಹನಗಳ ದಟ್ಟಣೆ ಹೆಚ್ಚಾಗುವ ಸಂಭವ ಇದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಮತ್ತು ವಾಹನಗಳ ಸಂಚಾರ, ನಿಲುಗಡೆ ವ್ಯವಸ್ಥೆಯನ್ನು ಮಾಡಲು ಸೂಕ್ತ ಸ್ಥಳಗಳನ್ನು ಗುರುತಿಸಲು ಪರಿಶೀಲಿಸಬೇಕು ಎಂದರು. ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.