ಈ ವೇಳೆ ಎಸ್ಡಿಎಂಸಿ ಅಧ್ಯಕ್ಷ ಗಂಗಾಧರಪ್ಪ ಮಾತನಾಡಿ, ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಉನ್ನತ ಸ್ಥಾನದಲ್ಲಿರುವ ಇವರು ಸರ್ಕಾರಿ ಶಾಲೆಯಲ್ಲಿನ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಹಿಂದೆ ಇವರು ಮಕ್ಕಳಿಗೆ ಗುಣಮಟ್ಟದ ಕಲಿಕೋಪಕರಣಗಳನ್ನು ನೀಡಿದ್ದಾರೆ. ಇವರು ನಮ್ಮ ಶಾಲೆಯ ಮೇಲೆ ಅಭಿಮಾನವನ್ನಿಟ್ಟು ಮಕ್ಕಳಿಗೆ ತಟ್ಟೆ ಮತ್ತು ಲೋಟಗಳನ್ನು ವಿತರಿಸಿದ್ದಾರೆ ಎಂದು ಹೇಳಿದರು.