<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಾಲಾ ಮೊದಲನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದರು.</p>.<p>ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಇಲಾಖಾ ಸವಲತ್ತನ್ನು ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ನೀಡಲಾಯಿತು.</p>.<p>ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಮನೀಷಾ ಎನ್.ಪತ್ರಿ, ಇಒ ಜಿ.ವಿ.ರಮೇಶ್, ಬಿಇಒ ಎನ್.ವೆಂಕಟೇಶಪ್ಪ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು.</p>.<p>ಲಕ್ಷ್ಮಿನಾರಾಯಣರೆಡ್ಡಿ ಅವರು 1.40 ಲಕ್ಷವೆಚ್ಚದಲ್ಲಿ ಶಾಲೆಗೆ ಸುಣ್ಣ, ದುರಸ್ತಿ, ಟೇಬಲ್, ಕುರ್ಚಿ ನೀಡಿದ್ದರು. ಧನ ಸಹಾಯ ಮಾಡಿದ ಕೊಠಡಿಯನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಾಗೂ ಲಕ್ಷ್ಮಿನಾರಾಯಣರೆಡ್ಡಿ ಲೋಕಾರ್ಪಣೆ ಮಾಡಿದರು.</p>.<p>ಸುಬ್ಬಾರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉತ್ತಮವಾಗಿ ಬರೆಯಲು, ಓದಲು ಕಲಿಸಬೇಕಾಗಿದೆ. ಕೆಲ ಮಕ್ಕಳಿಗೆ ಓದಲು, ಬರೆಯಲು ಬರುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹಿಂದುಳಿದ ಮಕ್ಕಳಿಗೆ ಓದಲು, ಬರೆಯುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಮನೀಷಾ ಎನ್.ಪತ್ರಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಅನೇಕರು ಮಹನೀಯರು, ಉನ್ನತ ಸ್ಥಾನಮಾನದಲ್ಲಿ ಇದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಆಕರ್ಷಣೆ ಮಾಡಲು, ಬಣ್ಣದ ಹಾಳೆಗಳಲ್ಲಿ ಟೋಪಿ, ಹಾರ ಹಾಕಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದಾರೆ. ಶಾಲಾವರಣ, ಕೊಠಡಿ ಅಲಂಕಾರ ಮಾಡಲಾಗಿದೆ ಎಂದರು.</p>.<p>ಇಒ ಜಿ.ವಿ.ರಮೇಶ್, ತಾಲ್ಲೂಕು ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಸಿಡಿಪಿಒ ರಾಮಚಂದ್ರ, ಆರ್.ಹನುಮಂತರೆಡ್ಡಿ, ಶಂಕರಪ್ಪ, ಬಿ.ಎನ್.ನಟರಾಜ್, ಜಿ.ಆರ್.ರಮೇಶ್, ಎಲ್.ಬೈರೆಡ್ಡಿ, ಎನ್.ಶಿವಪ್ಪ, ಸರಸ್ವತಮ್ಮ, ಶಿವರಾಮರೆಡ್ಡಿ, ಉಮಾದೇವಿ, ವಿಶ್ವನಾಥ್, ಫಕೃದ್ದೀನ್, ಬಿ.ಎಂ.ಪ್ರಮೀಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಶಾಲಾ ಮೊದಲನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಅರ್ಜಿಗೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದರು.</p>.<p>ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಇಲಾಖಾ ಸವಲತ್ತನ್ನು ದೇವರಗುಡಿಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ನೀಡಲಾಯಿತು.</p>.<p>ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಮನೀಷಾ ಎನ್.ಪತ್ರಿ, ಇಒ ಜಿ.ವಿ.ರಮೇಶ್, ಬಿಇಒ ಎನ್.ವೆಂಕಟೇಶಪ್ಪ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು.</p>.<p>ಲಕ್ಷ್ಮಿನಾರಾಯಣರೆಡ್ಡಿ ಅವರು 1.40 ಲಕ್ಷವೆಚ್ಚದಲ್ಲಿ ಶಾಲೆಗೆ ಸುಣ್ಣ, ದುರಸ್ತಿ, ಟೇಬಲ್, ಕುರ್ಚಿ ನೀಡಿದ್ದರು. ಧನ ಸಹಾಯ ಮಾಡಿದ ಕೊಠಡಿಯನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹಾಗೂ ಲಕ್ಷ್ಮಿನಾರಾಯಣರೆಡ್ಡಿ ಲೋಕಾರ್ಪಣೆ ಮಾಡಿದರು.</p>.<p>ಸುಬ್ಬಾರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉತ್ತಮವಾಗಿ ಬರೆಯಲು, ಓದಲು ಕಲಿಸಬೇಕಾಗಿದೆ. ಕೆಲ ಮಕ್ಕಳಿಗೆ ಓದಲು, ಬರೆಯಲು ಬರುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹಿಂದುಳಿದ ಮಕ್ಕಳಿಗೆ ಓದಲು, ಬರೆಯುವಂತೆ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಮನೀಷಾ ಎನ್.ಪತ್ರಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಅನೇಕರು ಮಹನೀಯರು, ಉನ್ನತ ಸ್ಥಾನಮಾನದಲ್ಲಿ ಇದ್ದಾರೆ. ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಆಕರ್ಷಣೆ ಮಾಡಲು, ಬಣ್ಣದ ಹಾಳೆಗಳಲ್ಲಿ ಟೋಪಿ, ಹಾರ ಹಾಕಿ, ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದಾರೆ. ಶಾಲಾವರಣ, ಕೊಠಡಿ ಅಲಂಕಾರ ಮಾಡಲಾಗಿದೆ ಎಂದರು.</p>.<p>ಇಒ ಜಿ.ವಿ.ರಮೇಶ್, ತಾಲ್ಲೂಕು ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಸಿಡಿಪಿಒ ರಾಮಚಂದ್ರ, ಆರ್.ಹನುಮಂತರೆಡ್ಡಿ, ಶಂಕರಪ್ಪ, ಬಿ.ಎನ್.ನಟರಾಜ್, ಜಿ.ಆರ್.ರಮೇಶ್, ಎಲ್.ಬೈರೆಡ್ಡಿ, ಎನ್.ಶಿವಪ್ಪ, ಸರಸ್ವತಮ್ಮ, ಶಿವರಾಮರೆಡ್ಡಿ, ಉಮಾದೇವಿ, ವಿಶ್ವನಾಥ್, ಫಕೃದ್ದೀನ್, ಬಿ.ಎಂ.ಪ್ರಮೀಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>