ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೌಡರ ಬಣವನ್ನು ಇನ್ನಷ್ಟು ಸದೃಢಗೊಳಿಸಲು ಪ್ರಯತ್ನಿಸಿ’

Last Updated 27 ಸೆಪ್ಟೆಂಬರ್ 2020, 2:15 IST
ಅಕ್ಷರ ಗಾತ್ರ

ಗೌರಿಬಿದನೂರು: ಪಕ್ಷಕ್ಕೆ ಚೂರಿ ಹಾಕುವ ಚಾಳಿಯನ್ನು ಶಾಸಕರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದು, ವಿನಾ ಕಾರಣ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಜಿ.ಪಂ ಮಾಜಿ ಅಧ್ಯಕ್ಷ ಎಚ್.ವಿ.ಮಂಜುನಾಥ್‌ ಹೇಳಿದರು.

ತಾಲ್ಲೂಕಿನ ಡಿ.ಪಾಳ್ಯದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಪುಟ್ಟಸ್ವಾಮಿಗೌಡರ ಬಣದ ಕಾರ್ಯಕರ್ತರ ಸಭೆ
ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಾವು ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಿರುವುದಾಗಿ ಶಾಸಕರು ಸಭೆ ಸಮಾರಂಭಗಳಲ್ಲಿ ಹೇಳುತ್ತಿರುತ್ತಾರೆ. ಆದರೆ ವಾಸ್ತವವಾಗಿ ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಶಾಸಕ ಶಿವಶಂಕರರೆಡ್ಡಿ ಹಲವು ಬಾರಿ ಪಕ್ಷದ ಬೆನ್ನಿಗೆ ಚೂರಿ ಹಾಕಿದ ನಿದರ್ಶನಗಳಿವೆ. ಇಂತಹವರಿಂದ ನಾವು ನೀತಿಪಾಠ ಕಲಿಯ ಬೇಕಾಗಿಲ್ಲ. ಎಂದು ಹೇಳಿದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಪಿ.ವಿ. ರಾಘವೇಂದ್ರ ಹನುಮಾನ್ ಮಾತನಾಡಿ, ನನ್ನ ಕ್ಷೇತ್ರದ ಜನರಿಗೆ ನಮ್ಮ ಬಗ್ಗೆ ತಿಳಿದಿದೆ. ಮತದಾರರು ನಮ್ಮ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಡಿ.ಪಾಳ್ಯದಲ್ಲಿ 18 ಸ್ಥಾನ
ಗಳನ್ನು ಗೆಲ್ಲುವ ಮೂಲಕ ನಮ್ಮ ಶಕ್ತಿ ತೋರಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT