<p><strong>ಗೌರಿಬಿದನೂರು:</strong> ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ತರುವುದನ್ನು ವಿರೋಧಿಸಿ ತಾಲ್ಲೂಕು ಕಚೇರಿ ಮುಂದೆ ನಡೆಯುತ್ತಿರುವ ರೈತರ ಪ್ರತಿಭಟನೆ 11ನೇ ದಿನ ತಮಟೆ ಚಳವಳಿ ಹಮ್ಮಿಕೊಂಡಿದ್ದರು.</p>.<p>ವಾಟದಹೊಸಹಳ್ಳಿ ಅಚ್ಚುಕಟ್ಟುದಾರರ ಸಂಘದ ಅಧ್ಯಕ್ಷ ಮಾಳಪ್ಪ ಮಾತನಾಡಿ, ನಮ್ಮ ಹೋರಾಟಗಳಿಗೆ ಅಧಿಕಾರಿಗಳಾಗಲಿ, ಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ. ರೈತರು ದೇಶಕ್ಕೆ ಬೆನ್ನೆಲುಬು ಎಂದು ರೈತರ ಬೆನ್ನೆಲುಬನ್ನು ಮುರಿಯುತ್ತಿದ್ದಾರೆ. ₹65 ಕೋಟಿ ತೆರಿಗೆ ಹಣ ಪೋಲಾಗುತ್ತದೆ. ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಸಾವಿರಾರು ಮಂದಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಮಧು ಸೂರ್ಯನಾರಾಯಣರೆಡ್ಡಿ, ಹರ್ಷವರ್ಧನ್ ರೆಡ್ಡಿ, ರವಿಚಂದ್ರರೆಡ್ಡಿ, ಕೋಡಿರ್ಲಪ್ಪ ಸೇರಿದಂತೆ ಹಲವು ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ತರುವುದನ್ನು ವಿರೋಧಿಸಿ ತಾಲ್ಲೂಕು ಕಚೇರಿ ಮುಂದೆ ನಡೆಯುತ್ತಿರುವ ರೈತರ ಪ್ರತಿಭಟನೆ 11ನೇ ದಿನ ತಮಟೆ ಚಳವಳಿ ಹಮ್ಮಿಕೊಂಡಿದ್ದರು.</p>.<p>ವಾಟದಹೊಸಹಳ್ಳಿ ಅಚ್ಚುಕಟ್ಟುದಾರರ ಸಂಘದ ಅಧ್ಯಕ್ಷ ಮಾಳಪ್ಪ ಮಾತನಾಡಿ, ನಮ್ಮ ಹೋರಾಟಗಳಿಗೆ ಅಧಿಕಾರಿಗಳಾಗಲಿ, ಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ. ರೈತರು ದೇಶಕ್ಕೆ ಬೆನ್ನೆಲುಬು ಎಂದು ರೈತರ ಬೆನ್ನೆಲುಬನ್ನು ಮುರಿಯುತ್ತಿದ್ದಾರೆ. ₹65 ಕೋಟಿ ತೆರಿಗೆ ಹಣ ಪೋಲಾಗುತ್ತದೆ. ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಸಾವಿರಾರು ಮಂದಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.</p>.<p>ಮಧು ಸೂರ್ಯನಾರಾಯಣರೆಡ್ಡಿ, ಹರ್ಷವರ್ಧನ್ ರೆಡ್ಡಿ, ರವಿಚಂದ್ರರೆಡ್ಡಿ, ಕೋಡಿರ್ಲಪ್ಪ ಸೇರಿದಂತೆ ಹಲವು ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>