ಸಂಘದ ಗೌರವಾಧ್ಯಕ್ಷ ಫಯಾಜುಲ್ಲಾ ಮಾತನಾಡಿ, ‘ರೈತ ವಿರೋಧಿಯಾದ ಕೇಂದ್ರ ಸರ್ಕಾರ ವಿದ್ಯುತ್ ಮಸೂದೆ, ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ, ಕೃಷಿ, ಗುತ್ತಿಗೆ ಬೀಜ, ಅಗತ್ಯ
ಹಕ್ಕುಗಳ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಖಂಡನೀಯವಾಗಿದೆ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಶೇ 95ರಷ್ಟು ಅನುದಾನಗಳನ್ನು ಕಡಿತ ಮಾಡಿದೆ. ಇದರಿಂದ ಗ್ರಾಮ ಪಂಚಾಯಿತಿ ನೌಕರರಿಗೆ ಅನ್ಯಾಯ ಆಗಿದೆ’ ಎಂದು ದೂರಿದರು.