‘ನೋಡಯ್ಯ ಈ ರೀತಿಯ ಜನರಿಗೆ ತೊಂದರೆ ಕೊಡಬಾರದು. ಇಂಥ ವಿಷಯಗಳು ನಮ್ಮವರೆಗೂ ಬರಬಾರದು. ಇವರಿಗೆ ಕೆಲಸ ಆಗದಿದ್ದರೆ ನೀನು ಖಂಡಿತ ಮನೆಗೆ ಹೋಗುತ್ತೀಯ. ಟ್ರಾನ್ಸ್ಫರ್ ಅಲ್ಲ. ಸೀದಾ ಮನೆಗೆ ಅಷ್ಟೇ. ನೀವು ಏನು ಕೆಲಸ ಮಾಡುತ್ತಿದ್ದೀರ. ಸರ್ಕಾರದಿಂದ ಕೊಡುವ ಹಣ ಅವರಿಗೆ ಸಿಗುವುದು ಬೇಡವಾ. ಅವರನ್ನು ನೋಡಿದರೆ ನಿಮಗೇನೂ ಅನ್ನಿಸಲ್ವಾ. ಮನೆ ಮನೆಗೆ ಹೋದಾಗ ಇವರು ಹೇಗೆ ನಿಮ್ಮ ಕಣ್ಣಿಗೆ ಬೀಳಲಿಲ್ಲ. ಸಂಜೆ ಹೊತ್ತಿಗೆ ಸ್ಯಾಂಕ್ಷನ್ ಆರ್ಡರ್ ಕೊಡಬೇಕು’ ಎಂದು ಸೂಚಿಸಿದರು.