<p><strong>ಚಿಕ್ಕಬಳ್ಳಾಪುರ: </strong>ಮೂರು ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ನವದೆಹಲಿಯಲ್ಲಿ ಒಂದು ವರ್ಷದ ಹಿಂದೆ ಆರಂಭವಾದ ರೈತ ಹೋರಾಟದ ಕಾವು ಜಿಲ್ಲೆಯಲ್ಲಿಯೂ ವ್ಯಾಪಕವಾಗಿ ಪಸರಿಸಿತ್ತು.</p>.<p>ಜಿಲ್ಲೆಯ ಹಳ್ಳಿಹಳ್ಳಿಗಳಲ್ಲಿಯೂ ರೈತ ಹೋರಾಟದ ಹಬ್ಬಿತ್ತು. ಒಂದು ಕಡೆ ಎಡಪಕ್ಷಗಳು ಹಾಗೂ ಅವುಗಳ ನೇತೃತ್ವದ ಸಂಘಟನೆಗಳು ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ ಜನಜಾಗೃತಿ ಮೂಡಿಸಿದ್ದವು.</p>.<p>ರೈತ ಸಂಘಟನೆಗಳು ಸಹ ಈ ಹೋರಾಟದಲ್ಲಿ ಸಕ್ರಿಯವಾಗಿದ್ದವು. ಇದಕ್ಕೆ ಪ್ರಗತಿ ಪರ ಸಂಘಟನೆಗಳು ಕೈಜೋಡಿಸಿದ್ದವು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸರಣಿ ಪ್ರತಿಭಟನೆ ಹೋರಾಟಗಳು ಸಹ ನಡೆದಿವೆ. ಸಂಯುಕ್ತ ರೈತ ಹೋರಾಟದ ಮುಖಂಡರ ಕರೆ ಆಧರಿಸಿ ಜಿಲ್ಲೆಯಲ್ಲಿಯೂ ಹೋರಾಟಗಳು ರೂಪಿತವಾಗಿವೆ.</p>.<p>ರೈತ ಸಂಘಟನೆಗಳು ಕೃಷಿ ಕಾಯ್ದೆಯ ವಿರುದ್ಧ ಜಿಲ್ಲೆಯಲ್ಲಿ ದೊಡ್ಡಮಟ್ಟದಲ್ಲಿಯೇ ಹೋರಾಟಗಳನ್ನು ರೂಪಿಸಿದ್ದವು. ನವದೆಹಲಿಯ ರೈತ ಹೋರಾಟಕ್ಕೆ ನ.26ರಂದು ಒಂದು ವರ್ಷ ಪೂರ್ಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಹೋರಾಟದ ರೂಪುರೇಷೆಗಳು ತಯಾರಾಗಿದ್ದವು. ನ.26ರಂದು ಚದುಲಪುರ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ವಿವಿಧ ಸಂಘಟನೆಗಳು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪ್ರಚಾರಾಂದೋಲನ ಸಹ ಹಮ್ಮಿಕೊಂಡಿದ್ದವು.</p>.<p>ಸಂಯುಕ್ತ ಹೋರಾಟ ಸಮಿತಿ ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧವಾಗಿರುತ್ತೇವೆ. ನ.26ರ ಹೋರಾಟ ಮತ್ತು ತೀರ್ಮಾನಗಳ ಬಗ್ಗೆ ಸಮಿತಿ ಹೇಳುವಂತೆ ನಡೆಯುತ್ತೇವೆ ಎಂದು ಮುಖಂಡರು ನುಡಿಯುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಮೂರು ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ನವದೆಹಲಿಯಲ್ಲಿ ಒಂದು ವರ್ಷದ ಹಿಂದೆ ಆರಂಭವಾದ ರೈತ ಹೋರಾಟದ ಕಾವು ಜಿಲ್ಲೆಯಲ್ಲಿಯೂ ವ್ಯಾಪಕವಾಗಿ ಪಸರಿಸಿತ್ತು.</p>.<p>ಜಿಲ್ಲೆಯ ಹಳ್ಳಿಹಳ್ಳಿಗಳಲ್ಲಿಯೂ ರೈತ ಹೋರಾಟದ ಹಬ್ಬಿತ್ತು. ಒಂದು ಕಡೆ ಎಡಪಕ್ಷಗಳು ಹಾಗೂ ಅವುಗಳ ನೇತೃತ್ವದ ಸಂಘಟನೆಗಳು ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ ಜನಜಾಗೃತಿ ಮೂಡಿಸಿದ್ದವು.</p>.<p>ರೈತ ಸಂಘಟನೆಗಳು ಸಹ ಈ ಹೋರಾಟದಲ್ಲಿ ಸಕ್ರಿಯವಾಗಿದ್ದವು. ಇದಕ್ಕೆ ಪ್ರಗತಿ ಪರ ಸಂಘಟನೆಗಳು ಕೈಜೋಡಿಸಿದ್ದವು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸರಣಿ ಪ್ರತಿಭಟನೆ ಹೋರಾಟಗಳು ಸಹ ನಡೆದಿವೆ. ಸಂಯುಕ್ತ ರೈತ ಹೋರಾಟದ ಮುಖಂಡರ ಕರೆ ಆಧರಿಸಿ ಜಿಲ್ಲೆಯಲ್ಲಿಯೂ ಹೋರಾಟಗಳು ರೂಪಿತವಾಗಿವೆ.</p>.<p>ರೈತ ಸಂಘಟನೆಗಳು ಕೃಷಿ ಕಾಯ್ದೆಯ ವಿರುದ್ಧ ಜಿಲ್ಲೆಯಲ್ಲಿ ದೊಡ್ಡಮಟ್ಟದಲ್ಲಿಯೇ ಹೋರಾಟಗಳನ್ನು ರೂಪಿಸಿದ್ದವು. ನವದೆಹಲಿಯ ರೈತ ಹೋರಾಟಕ್ಕೆ ನ.26ರಂದು ಒಂದು ವರ್ಷ ಪೂರ್ಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಹೋರಾಟದ ರೂಪುರೇಷೆಗಳು ತಯಾರಾಗಿದ್ದವು. ನ.26ರಂದು ಚದುಲಪುರ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ವಿವಿಧ ಸಂಘಟನೆಗಳು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪ್ರಚಾರಾಂದೋಲನ ಸಹ ಹಮ್ಮಿಕೊಂಡಿದ್ದವು.</p>.<p>ಸಂಯುಕ್ತ ಹೋರಾಟ ಸಮಿತಿ ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧವಾಗಿರುತ್ತೇವೆ. ನ.26ರ ಹೋರಾಟ ಮತ್ತು ತೀರ್ಮಾನಗಳ ಬಗ್ಗೆ ಸಮಿತಿ ಹೇಳುವಂತೆ ನಡೆಯುತ್ತೇವೆ ಎಂದು ಮುಖಂಡರು ನುಡಿಯುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>