<p><strong>ಚಿಕ್ಕಬಳ್ಳಾಪುರ:</strong> ಬಡವರು, ಮಧ್ಯಮವರ್ಗದ ಜನರಿಗೆ ಅನುಕೂಲ ಆಗಲಿ ಎನ್ನುವ ಉದ್ದೇಶದಿಂದ ನಿತ್ಯ ಬಳಕೆಯ ಕೆಲವು ವಸ್ತುಗಳ ಮೇಲೆ ಶೇ 28ರಷ್ಟಿದ್ದ ಜಿಎಸ್ಟಿಯನ್ನು ಶೇ 5ಕ್ಕೆ ಇಳಿಸಿದ್ದೇವೆ. ಇದನ್ನು ಸ್ವಾಗತಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು. </p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಜನಸಾಮಾನ್ಯರು, ಬಡವರ ಬಗ್ಗೆ ಕಳಕಳಿ ಇಲ್ಲ. ಜಿಎಸ್ಟಿ ಕಡಿತ ಮಾಡಿದಾಗ ಸ್ವಾಗತ ಮಾಡಬೇಕು. ಇದರ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದರೆ ಅವರು ಬಡವರ ವಿರೋಧಿಗಳು ಎಂದರು.</p>.<p>ಜಿಎಸ್ಟಿ ಕಡಿತದಿಂದ ರಾಜ್ಯ ಸರ್ಕಾರಕ್ಕೆ ಆದಾಯ ಕಡಿಮೆ ಆಗುತ್ತದೆ ಎನ್ನುತ್ತಾರೆ. ಕಡಿತದಿಂದ ವಹಿವಾಟು ಹೆಚ್ಚುತ್ತದೆ. ಸಚಿವ ಕೃಷ್ಣ ಬೈರೇಗೌಡ ಅರ್ಥಶಾಸ್ತ್ರದ ಸಾಮಾನ್ಯ ಜ್ಞಾನವಿಲ್ಲದ ರೀತಿಯಲ್ಲಿ ಮಾತನಾಡುತ್ತಾರೆ. ಒಂದು ಕಾರಿನ ಬೆಲೆ ₹ 10 ಲಕ್ಷವಿದ್ದು ₹ 1 ಲಕ್ಷ ಕಡಿಮೆ ಆದರೆ ಗ್ರಾಹಕರು ಮುಂದಿನ ವರ್ಷದವರೆಗೂ ಕಾಯದೇ ಈಗಲೇ ಖರೀದಿಸುತ್ತಾರೆ. ವಹಿವಾಟು ಹೆಚ್ಚಿದರೆ ಆದಾಯ ಬರುತ್ತದೆ ಎಂದು ಹೇಳಿದರು.</p>.<p>14, 15ನೇ ಸ್ಥಾನದಲ್ಲಿದ್ದ ದೇಶದ ಆರ್ಥಿಕ ಸ್ಥಾನವನ್ನು ನರೇಂದ್ರ ಮೋದಿ ಅವರ ಆಡಳಿತವು ನಾಲ್ಕನೇ ಸ್ಥಾನಕ್ಕೆ ತಂದಿದೆ. ಕಾಂಗ್ರೆಸ್ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಬಡವರು, ಮಧ್ಯಮವರ್ಗದ ಜನರಿಗೆ ಅನುಕೂಲ ಆಗಲಿ ಎನ್ನುವ ಉದ್ದೇಶದಿಂದ ನಿತ್ಯ ಬಳಕೆಯ ಕೆಲವು ವಸ್ತುಗಳ ಮೇಲೆ ಶೇ 28ರಷ್ಟಿದ್ದ ಜಿಎಸ್ಟಿಯನ್ನು ಶೇ 5ಕ್ಕೆ ಇಳಿಸಿದ್ದೇವೆ. ಇದನ್ನು ಸ್ವಾಗತಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು. </p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಜನಸಾಮಾನ್ಯರು, ಬಡವರ ಬಗ್ಗೆ ಕಳಕಳಿ ಇಲ್ಲ. ಜಿಎಸ್ಟಿ ಕಡಿತ ಮಾಡಿದಾಗ ಸ್ವಾಗತ ಮಾಡಬೇಕು. ಇದರ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದರೆ ಅವರು ಬಡವರ ವಿರೋಧಿಗಳು ಎಂದರು.</p>.<p>ಜಿಎಸ್ಟಿ ಕಡಿತದಿಂದ ರಾಜ್ಯ ಸರ್ಕಾರಕ್ಕೆ ಆದಾಯ ಕಡಿಮೆ ಆಗುತ್ತದೆ ಎನ್ನುತ್ತಾರೆ. ಕಡಿತದಿಂದ ವಹಿವಾಟು ಹೆಚ್ಚುತ್ತದೆ. ಸಚಿವ ಕೃಷ್ಣ ಬೈರೇಗೌಡ ಅರ್ಥಶಾಸ್ತ್ರದ ಸಾಮಾನ್ಯ ಜ್ಞಾನವಿಲ್ಲದ ರೀತಿಯಲ್ಲಿ ಮಾತನಾಡುತ್ತಾರೆ. ಒಂದು ಕಾರಿನ ಬೆಲೆ ₹ 10 ಲಕ್ಷವಿದ್ದು ₹ 1 ಲಕ್ಷ ಕಡಿಮೆ ಆದರೆ ಗ್ರಾಹಕರು ಮುಂದಿನ ವರ್ಷದವರೆಗೂ ಕಾಯದೇ ಈಗಲೇ ಖರೀದಿಸುತ್ತಾರೆ. ವಹಿವಾಟು ಹೆಚ್ಚಿದರೆ ಆದಾಯ ಬರುತ್ತದೆ ಎಂದು ಹೇಳಿದರು.</p>.<p>14, 15ನೇ ಸ್ಥಾನದಲ್ಲಿದ್ದ ದೇಶದ ಆರ್ಥಿಕ ಸ್ಥಾನವನ್ನು ನರೇಂದ್ರ ಮೋದಿ ಅವರ ಆಡಳಿತವು ನಾಲ್ಕನೇ ಸ್ಥಾನಕ್ಕೆ ತಂದಿದೆ. ಕಾಂಗ್ರೆಸ್ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>