<p><strong>ಗುಡಿಬಂಡೆ:</strong> ರಾಮಪಟ್ಟಣ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಸಿಗ್ಬತ್ತುಲ್ಲಾ ಅವರ ನೇತೃತ್ವದಲ್ಲಿ ಮನೆಗಳ ಮಾಲೀಕರು ಮತ್ತು ಅಧಿಕಾರಿಗಳ ಸಭೆ ಗುರುವಾರ ನಡೆಯಿತು. </p>.<p>ತಾವು ವಾಸಿಸುವ ಸ್ಥಳದಲ್ಲಿ ಉತ್ತಮ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ನಷ್ಟ ಪರಿಹಾರ ಕೊಟ್ಟಲ್ಲಿ ರಸ್ತೆ ಅಭಿವೃದ್ಧಿಗೆ ತಮ್ಮ ಅಭ್ಯಂತರವಿಲ್ಲ ಎಂದು ಮನೆಗಳ ಮಾಲೀಕರು ಸಭೆಯಲ್ಲಿ ತಿಳಿಸಿದರು. </p>.<p>ತಹಶೀಲ್ದಾರ್ ಸಿಗ್ಬತ್ತುಲ್ಲಾ, ಮಾತನಾಡಿ, ‘ರಸ್ತೆ ಅಗಲೀಕರಣವಾಗಬೇಕು ಎಂಬ ಸರ್ಕಾರದ ಆದೇಶದ ಪ್ರಕಾರ ರಸ್ತೆ ಮತ್ತು ಮನೆಗಳನ್ನು ಪರಿಶೀಲಿಸಲಾಗಿದೆ. ರಾಮಪಟ್ಟಣದಲ್ಲಿ 20*20 ಅಡಿಗಳಷ್ಟು ಅಗಲದ ರಸ್ತೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಕಾಮಗಾರಿಯಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು. ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು. </p>.<p>ರಸ್ತೆ ಅಭಿವೃದ್ಧಿಯಿಂದ ನಾವು ವಾಸಿಸುತ್ತಿರುವ ಮನೆಗಳನ್ನು ನಾವು ಕಳೆದುಕೊಳ್ಳುತ್ತೇವೆ. ಇದಕ್ಕಾಗಿ ಸರ್ಕಾರ ನಮಗೆ ನಷ್ಟ ಪರಿಹಾರ ಕೊಡಬೇಕು. ಅಲ್ಲದೆ, ನಿವೇಶನಗಳನ್ನು ಮಂಜೂರು ಮಾಡಬೇಕು ಎಂದು ಮನೆಗಳ ಮಾಲೀಕರು ಮನವಿ ಮಾಡಿದರು. </p>.<p>ಮಸೀದಿ ಬಳಿ ಇರುವ ಚರಂಡಿ ಕಾಮಗಾರಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹1 ಕೋಟಿ ಮಂಜೂರು ಆಗಿದೆ. ಆರು ತಿಂಗಳಿನೊಳಗಾಗಿ ಆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕಪಯೋಗಿ ಇಲಾಖೆ ಎಂಜಿನಿಯರ್ ಪೂಜಪ್ಪ ಭರವಸೆ ನೀಡಿದರು. </p>.<p>ಈ ವೇಳೆ ತಹಶೀಲ್ದಾರ್ ಸಿಗ್ಬತ್ತುಲ್ಲಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಬಾ ಶರೀನಾ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಪೂಜಪ್ಪ, ಕೆಇಬಿ ವಿಶ್ವಾಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ರಾಮಪಟ್ಟಣ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಸಿಗ್ಬತ್ತುಲ್ಲಾ ಅವರ ನೇತೃತ್ವದಲ್ಲಿ ಮನೆಗಳ ಮಾಲೀಕರು ಮತ್ತು ಅಧಿಕಾರಿಗಳ ಸಭೆ ಗುರುವಾರ ನಡೆಯಿತು. </p>.<p>ತಾವು ವಾಸಿಸುವ ಸ್ಥಳದಲ್ಲಿ ಉತ್ತಮ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ನಷ್ಟ ಪರಿಹಾರ ಕೊಟ್ಟಲ್ಲಿ ರಸ್ತೆ ಅಭಿವೃದ್ಧಿಗೆ ತಮ್ಮ ಅಭ್ಯಂತರವಿಲ್ಲ ಎಂದು ಮನೆಗಳ ಮಾಲೀಕರು ಸಭೆಯಲ್ಲಿ ತಿಳಿಸಿದರು. </p>.<p>ತಹಶೀಲ್ದಾರ್ ಸಿಗ್ಬತ್ತುಲ್ಲಾ, ಮಾತನಾಡಿ, ‘ರಸ್ತೆ ಅಗಲೀಕರಣವಾಗಬೇಕು ಎಂಬ ಸರ್ಕಾರದ ಆದೇಶದ ಪ್ರಕಾರ ರಸ್ತೆ ಮತ್ತು ಮನೆಗಳನ್ನು ಪರಿಶೀಲಿಸಲಾಗಿದೆ. ರಾಮಪಟ್ಟಣದಲ್ಲಿ 20*20 ಅಡಿಗಳಷ್ಟು ಅಗಲದ ರಸ್ತೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಕಾಮಗಾರಿಯಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು. ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು. </p>.<p>ರಸ್ತೆ ಅಭಿವೃದ್ಧಿಯಿಂದ ನಾವು ವಾಸಿಸುತ್ತಿರುವ ಮನೆಗಳನ್ನು ನಾವು ಕಳೆದುಕೊಳ್ಳುತ್ತೇವೆ. ಇದಕ್ಕಾಗಿ ಸರ್ಕಾರ ನಮಗೆ ನಷ್ಟ ಪರಿಹಾರ ಕೊಡಬೇಕು. ಅಲ್ಲದೆ, ನಿವೇಶನಗಳನ್ನು ಮಂಜೂರು ಮಾಡಬೇಕು ಎಂದು ಮನೆಗಳ ಮಾಲೀಕರು ಮನವಿ ಮಾಡಿದರು. </p>.<p>ಮಸೀದಿ ಬಳಿ ಇರುವ ಚರಂಡಿ ಕಾಮಗಾರಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹1 ಕೋಟಿ ಮಂಜೂರು ಆಗಿದೆ. ಆರು ತಿಂಗಳಿನೊಳಗಾಗಿ ಆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕಪಯೋಗಿ ಇಲಾಖೆ ಎಂಜಿನಿಯರ್ ಪೂಜಪ್ಪ ಭರವಸೆ ನೀಡಿದರು. </p>.<p>ಈ ವೇಳೆ ತಹಶೀಲ್ದಾರ್ ಸಿಗ್ಬತ್ತುಲ್ಲಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಬಾ ಶರೀನಾ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಪೂಜಪ್ಪ, ಕೆಇಬಿ ವಿಶ್ವಾಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>