<p><strong>ಗುಡಿಬಂಡೆ: ಪ</strong>ಟ್ಟಣದ ವಿವಿಧ ವಾರ್ಡ್ಗಳಲ್ಲಿ ಪೌರ ಕಾರ್ಮಿಕರು ಸುರಕ್ಷತಾ ಕವಚಗಳನ್ನು ಧರಿಸದೆ ಚರಂಡಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ಸುರಕ್ಷತಾ ಕವಚಗಳನ್ನು ಒದಗಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. </p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಅನೇಕ ವಿವಿಧ ವಾರ್ಡ್ಗಳಲ್ಲಿ ಚರಂಡಿ ಸೇರಿ ಇನ್ನಿತರ ಸ್ಥಳಗಳನ್ನು ಶುಚಿಯಾಗಿಡುವ ಪೌರಕಾರ್ಮಿಕರ ಕೈ ಮತ್ತು ಕಾಲುಗಳಿಗೆ ಧರಿಸಲು ಸುರಕ್ಷತಾ ಕವಚಗಳನ್ನು ವಿತರಿಸಿಲ್ಲ. ಹೀಗಾಗಿ, ಪೌರಕಾರ್ಮಿಕರು ಬರಿಗೈಯಲ್ಲೇ ಚರಂಡಿಗಳನ್ನು ಶುಚಿ ಮಾಡುತ್ತಿದ್ದಾರೆ. </p>.<p>‘ಚರಂಡಿ ಮತ್ತು ಬೀದಿಗಳನ್ನು ಸ್ವಚ್ಛ ಮಾಡಲು ಸುರಕ್ಷತಾ ಸಲಕರಣೆಗಳನ್ನು ನೀಡಿ ಎಂದು ಅಧಿಕಾರಿಗಳ ಬಳಿ ಕೇಳಿದ್ದೇವೆ. ಆದರೆ, ಅಧಿಕಾರಿಗಳು ಸರಿಯಾದ ಸಮಯಕ್ಕೆ ಸುರಕ್ಷತಾ ಕವಚಗಳನ್ನು ನೀಡದೆ ಸತಾಯಿಸುತ್ತಿದ್ದಾರೆ. ಈ ಬಗ್ಗೆ ನಾವು ಧ್ವನಿಯೆತ್ತಿದ್ದರು ತೊಂದರೆ ಕೊಡುತ್ತಾರೆ’ ಎಂದು ಕೆಲವು ಪೌರಕಾರ್ಮಿಕರು ದೂರಿದ್ದಾರೆ. </p>.<p>ಈ ಕುರಿತು ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಯೋಜನಾ ನಿರ್ದೇಶಕ ಮಂಜುನಾಥ್, ‘ಪೌರ ಕಾರ್ಮಿಕರು ಸ್ವಚ್ಛತೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಸುರಕ್ಷತಾ ಸಲಕರಣೆಗಳನ್ನು ಬಳಸಬೇಕು. ಸುರಕ್ಷತಾ ಸಲಕರಣೆ ಇಲ್ಲದೆ ಕಾರ್ಮಿಕರನ್ನು ಸ್ವಚ್ಛತಾ ಕಾಮಗಾರಿಯಲ್ಲಿ ತೊಡಗಿಸುವುದು ಅಪರಾಧ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: ಪ</strong>ಟ್ಟಣದ ವಿವಿಧ ವಾರ್ಡ್ಗಳಲ್ಲಿ ಪೌರ ಕಾರ್ಮಿಕರು ಸುರಕ್ಷತಾ ಕವಚಗಳನ್ನು ಧರಿಸದೆ ಚರಂಡಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ಸುರಕ್ಷತಾ ಕವಚಗಳನ್ನು ಒದಗಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. </p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಅನೇಕ ವಿವಿಧ ವಾರ್ಡ್ಗಳಲ್ಲಿ ಚರಂಡಿ ಸೇರಿ ಇನ್ನಿತರ ಸ್ಥಳಗಳನ್ನು ಶುಚಿಯಾಗಿಡುವ ಪೌರಕಾರ್ಮಿಕರ ಕೈ ಮತ್ತು ಕಾಲುಗಳಿಗೆ ಧರಿಸಲು ಸುರಕ್ಷತಾ ಕವಚಗಳನ್ನು ವಿತರಿಸಿಲ್ಲ. ಹೀಗಾಗಿ, ಪೌರಕಾರ್ಮಿಕರು ಬರಿಗೈಯಲ್ಲೇ ಚರಂಡಿಗಳನ್ನು ಶುಚಿ ಮಾಡುತ್ತಿದ್ದಾರೆ. </p>.<p>‘ಚರಂಡಿ ಮತ್ತು ಬೀದಿಗಳನ್ನು ಸ್ವಚ್ಛ ಮಾಡಲು ಸುರಕ್ಷತಾ ಸಲಕರಣೆಗಳನ್ನು ನೀಡಿ ಎಂದು ಅಧಿಕಾರಿಗಳ ಬಳಿ ಕೇಳಿದ್ದೇವೆ. ಆದರೆ, ಅಧಿಕಾರಿಗಳು ಸರಿಯಾದ ಸಮಯಕ್ಕೆ ಸುರಕ್ಷತಾ ಕವಚಗಳನ್ನು ನೀಡದೆ ಸತಾಯಿಸುತ್ತಿದ್ದಾರೆ. ಈ ಬಗ್ಗೆ ನಾವು ಧ್ವನಿಯೆತ್ತಿದ್ದರು ತೊಂದರೆ ಕೊಡುತ್ತಾರೆ’ ಎಂದು ಕೆಲವು ಪೌರಕಾರ್ಮಿಕರು ದೂರಿದ್ದಾರೆ. </p>.<p>ಈ ಕುರಿತು ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಯೋಜನಾ ನಿರ್ದೇಶಕ ಮಂಜುನಾಥ್, ‘ಪೌರ ಕಾರ್ಮಿಕರು ಸ್ವಚ್ಛತೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಸುರಕ್ಷತಾ ಸಲಕರಣೆಗಳನ್ನು ಬಳಸಬೇಕು. ಸುರಕ್ಷತಾ ಸಲಕರಣೆ ಇಲ್ಲದೆ ಕಾರ್ಮಿಕರನ್ನು ಸ್ವಚ್ಛತಾ ಕಾಮಗಾರಿಯಲ್ಲಿ ತೊಡಗಿಸುವುದು ಅಪರಾಧ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>