<p><strong>ಗುಡಿಬಂಡೆ:</strong> ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗವಾಯಿ ಅವರು ದಲಿತರು ಎಂಬ ಕಾರಣಕ್ಕೆ ಅವರ ಮೇಲೆ ವಕೀಲ ಶೂ ಎಸೆದಿದ್ದಾನೆ. ಈತನ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಿಪಿಎಂ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.</p>.<p>ಸಿಪಿಎಂ ಮುಖಂಡ ಮುನಿಸ್ವಾಮಿ ಮಾತನಾಡಿ, ದೇಶದಲ್ಲಿ ದಲಿತರು, ಬಡವರು ಉನ್ನತ ಹುದ್ದೆ ಅಲಂಕರಿಸಿದರೆ ಇವರ ಮನಸು ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ಆಗಾಗ ತೋರಿಸುತ್ತಿದ್ದಾರೆ.</p>.<p>ಈ ವಕೀಲನಿಗೆ ದೇಶದ ಸಂವಿಧಾನದ ಮೇಲೆ ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲದ ರೀತಿಯಲ್ಲಿ ವರ್ತಿಸಿಕೊಂಡಿದ್ದಾನೆ. ಇವರ ವಿರುದ್ಧ ಕ್ರಮವಹಿಸಿ ಶಿಕ್ಷೆ ನೀಡಬೇಕು. ಈ ರೀತಿಯ ಕೃತ್ಯಗಳನ್ನು ಸಿಪಿಎಂ ಎಂದಿಗೂ ಸಹಿಸುವುದಿಲ್ಲ. ಈ ಘಟನೆಯನ್ನು ಖಂಡಿಸುತ್ತೇವೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಸಿಗ್ಬತ್ವುಲ್ಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡ ಜಯರಾಮರೆಡ್ಡಿ, ರಾಜು, ಶ್ರೀನಿವಾಸ್, ರಮಣ, ದೇವರಾಜು, ಸೋಮಶೇಖರ್, ಕೊಂಡಪ್ಪ, ರಾಜಪ್ಪ, ಗಂಗರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗವಾಯಿ ಅವರು ದಲಿತರು ಎಂಬ ಕಾರಣಕ್ಕೆ ಅವರ ಮೇಲೆ ವಕೀಲ ಶೂ ಎಸೆದಿದ್ದಾನೆ. ಈತನ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಿಪಿಎಂ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.</p>.<p>ಸಿಪಿಎಂ ಮುಖಂಡ ಮುನಿಸ್ವಾಮಿ ಮಾತನಾಡಿ, ದೇಶದಲ್ಲಿ ದಲಿತರು, ಬಡವರು ಉನ್ನತ ಹುದ್ದೆ ಅಲಂಕರಿಸಿದರೆ ಇವರ ಮನಸು ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ಆಗಾಗ ತೋರಿಸುತ್ತಿದ್ದಾರೆ.</p>.<p>ಈ ವಕೀಲನಿಗೆ ದೇಶದ ಸಂವಿಧಾನದ ಮೇಲೆ ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲದ ರೀತಿಯಲ್ಲಿ ವರ್ತಿಸಿಕೊಂಡಿದ್ದಾನೆ. ಇವರ ವಿರುದ್ಧ ಕ್ರಮವಹಿಸಿ ಶಿಕ್ಷೆ ನೀಡಬೇಕು. ಈ ರೀತಿಯ ಕೃತ್ಯಗಳನ್ನು ಸಿಪಿಎಂ ಎಂದಿಗೂ ಸಹಿಸುವುದಿಲ್ಲ. ಈ ಘಟನೆಯನ್ನು ಖಂಡಿಸುತ್ತೇವೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಸಿಗ್ಬತ್ವುಲ್ಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಮುಖಂಡ ಜಯರಾಮರೆಡ್ಡಿ, ರಾಜು, ಶ್ರೀನಿವಾಸ್, ರಮಣ, ದೇವರಾಜು, ಸೋಮಶೇಖರ್, ಕೊಂಡಪ್ಪ, ರಾಜಪ್ಪ, ಗಂಗರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>