<p>ಗುಡಿಬಂಡೆ: ತಾಲ್ಲೂಕಿನ ಬಿಚಗಾನಹಳ್ಳಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಶನಿವಾರ ಮಕ್ಕಳ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.</p>.<p>ಪಿಡಿಒ ಲೋಕೇಶ್ ಮಾತನಾಡಿ, ‘ರಜಾ ಅವಧಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಪ್ರೋತ್ಸಾಹಿಸುವ ರಚನಾತ್ಮಕ ಕಾರ್ಯಕ್ರಮವಾಗಿದೆ’ ಎಂದು ಹೇಳಿದರು.</p>.<p>ಶಿಕ್ಷಕ ಗೋಪಾಲಕೃಷ್ಣ ಸಿಂಗ್ ಮಾತನಾಡಿ, 15 ದಿನ ನಡೆಯುವ ಈ ಶಿಬಿರವು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ನಡೆಯುತ್ತದೆ. ಈ ವೇಳೆ ಕಲಿಕೆಗೆ ಹೆಚ್ಚು ಒತ್ತು ನೀಡುವ ಜತೆಗೆ ಗ್ರಾಮೀಣ ಕ್ರೀಡೆ, ವಿವಿಧ ಆಟಿಕೆಗಳನ್ನು ಆಡಿಸಲಾಗುತ್ತದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎನ್. ಗೋಪಾಲ ಕೃಷ್ಣಸಿಂಗ್, ತಾಲ್ಲೂಕು ಐಇಸಿ ಸಂಯೋಜಕ ರಾಮಂಜಿ, ಗ್ರಂಥಪಾಲಕ ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-16-456240428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ತಾಲ್ಲೂಕಿನ ಬಿಚಗಾನಹಳ್ಳಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಶನಿವಾರ ಮಕ್ಕಳ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.</p>.<p>ಪಿಡಿಒ ಲೋಕೇಶ್ ಮಾತನಾಡಿ, ‘ರಜಾ ಅವಧಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಪ್ರೋತ್ಸಾಹಿಸುವ ರಚನಾತ್ಮಕ ಕಾರ್ಯಕ್ರಮವಾಗಿದೆ’ ಎಂದು ಹೇಳಿದರು.</p>.<p>ಶಿಕ್ಷಕ ಗೋಪಾಲಕೃಷ್ಣ ಸಿಂಗ್ ಮಾತನಾಡಿ, 15 ದಿನ ನಡೆಯುವ ಈ ಶಿಬಿರವು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ನಡೆಯುತ್ತದೆ. ಈ ವೇಳೆ ಕಲಿಕೆಗೆ ಹೆಚ್ಚು ಒತ್ತು ನೀಡುವ ಜತೆಗೆ ಗ್ರಾಮೀಣ ಕ್ರೀಡೆ, ವಿವಿಧ ಆಟಿಕೆಗಳನ್ನು ಆಡಿಸಲಾಗುತ್ತದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎನ್. ಗೋಪಾಲ ಕೃಷ್ಣಸಿಂಗ್, ತಾಲ್ಲೂಕು ಐಇಸಿ ಸಂಯೋಜಕ ರಾಮಂಜಿ, ಗ್ರಂಥಪಾಲಕ ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-16-456240428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>