<p><strong>ಗುಡಿಬಂಡೆ</strong>: ನಮ್ಮಲ್ಲಿ ದೇಶ ಪ್ರೇಮ, ಮಾನವೀಯತೆ ಸೇರಿದಂತೆ ಎಲ್ಲಾ ಗುಣ ಅಳವಡಿಸಿಕೊಂಡು ಮನುಷ್ಯತ್ವ ಪರಿಪಕ್ವವಾಗಲು ಪುಣ್ಯ ಪುರುಷರ ಜಯಂತಿ ಆಚರಣೆ ಅವಶ್ಯಕ ಎಂದು ಕಸಪಾ ಅಧ್ಯಕ್ಷ ಸುಬ್ಬರಾಯಪ್ಪ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಭಗವದ್ಗೀತೆ ಒಂದು ಧರ್ಮ ಜಾತಿಗೆ ಸೀಮಿತವಾಗದೆ ಇಡೀ ಮನುಕುಲದ ಮಾರ್ಗದರ್ಶಿಯಾಗಿದೆ. ಮಾನವಕುಲದ ಸಮಾನತೆ ಮತ್ತು ಶ್ರೇಯಸ್ಸಿಗಾಗಿ ಕೃಷ್ಣ ಭಗವದ್ಗೀತೆಯಲ್ಲಿ ಬೋಧಿಸಿರುವ ಆದರ್ಶಗಳು ಪೂರಕವಾಗಿವೆ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಸಿಗ್ಬತ್ ವುಲ್ಲಾ ಮಾತನಾಡಿ, ಸುಖ ಸಂತೋಷ ಇಲ್ಲದ ಮೇಲೆ ಜೀವನಕ್ಕೆ ಅರ್ಥ ಇರುವುದಿಲ್ಲ, ನಿಜವಾದ ಸಂತೋಷ ಕಾಣಬೇಕಾದರೆ ಭಗವಂತನನ್ನು ಅರಿಯಬೇಕು. ಅವನಲ್ಲಿ ಶರಣಾಗಬೇಕು ಶ್ರೀಕೃಷ್ಣನ ಸಂದೇಶ ಪಾಲನೆ ಮಾಡಬೇಕು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀಪತಿ ರೆಡ್ಡಿ, ಪಯಾಜ್ ಅಹಮದ್, ಶ್ರೀನಿವಾಸ್ ಯಾದವ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ನಮ್ಮಲ್ಲಿ ದೇಶ ಪ್ರೇಮ, ಮಾನವೀಯತೆ ಸೇರಿದಂತೆ ಎಲ್ಲಾ ಗುಣ ಅಳವಡಿಸಿಕೊಂಡು ಮನುಷ್ಯತ್ವ ಪರಿಪಕ್ವವಾಗಲು ಪುಣ್ಯ ಪುರುಷರ ಜಯಂತಿ ಆಚರಣೆ ಅವಶ್ಯಕ ಎಂದು ಕಸಪಾ ಅಧ್ಯಕ್ಷ ಸುಬ್ಬರಾಯಪ್ಪ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಭಗವದ್ಗೀತೆ ಒಂದು ಧರ್ಮ ಜಾತಿಗೆ ಸೀಮಿತವಾಗದೆ ಇಡೀ ಮನುಕುಲದ ಮಾರ್ಗದರ್ಶಿಯಾಗಿದೆ. ಮಾನವಕುಲದ ಸಮಾನತೆ ಮತ್ತು ಶ್ರೇಯಸ್ಸಿಗಾಗಿ ಕೃಷ್ಣ ಭಗವದ್ಗೀತೆಯಲ್ಲಿ ಬೋಧಿಸಿರುವ ಆದರ್ಶಗಳು ಪೂರಕವಾಗಿವೆ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಸಿಗ್ಬತ್ ವುಲ್ಲಾ ಮಾತನಾಡಿ, ಸುಖ ಸಂತೋಷ ಇಲ್ಲದ ಮೇಲೆ ಜೀವನಕ್ಕೆ ಅರ್ಥ ಇರುವುದಿಲ್ಲ, ನಿಜವಾದ ಸಂತೋಷ ಕಾಣಬೇಕಾದರೆ ಭಗವಂತನನ್ನು ಅರಿಯಬೇಕು. ಅವನಲ್ಲಿ ಶರಣಾಗಬೇಕು ಶ್ರೀಕೃಷ್ಣನ ಸಂದೇಶ ಪಾಲನೆ ಮಾಡಬೇಕು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀಪತಿ ರೆಡ್ಡಿ, ಪಯಾಜ್ ಅಹಮದ್, ಶ್ರೀನಿವಾಸ್ ಯಾದವ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>