<p><strong>ಗುಡಿಬಂಡೆ:</strong> ಅಮಾನಿ ಭೈರಸಾಗರ ಕೆರೆಕಟ್ಟೆ ಮೇಲೆ ರಾತ್ರಿ ಹೊತ್ತಿನಲ್ಲಿ ಜನಸಾಮಾನ್ಯರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಆದರೆ, ಈ ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕವನ್ನೇ ಕಲ್ಪಿಸಲಾಗಿಲ್ಲ.</p>.<p>ಜೊತೆಗೆ ವಿದ್ಯುತ್ ಕಂಬಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣದಿಂದಾಗಿ ಅವು ತುಕ್ಕು ಹಿಡಿದಿದ್ದು, ಯಾವಾಗ ಬಿದ್ದು, ಅಪಾಯ ತಂದೊಡ್ಡಲಿವೆಯೇ ಎಂಬ ಭೀತಿ ಎದುರಾಗಿದೆ. ಹೀಗಾಗಿ, ಈ ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಬೇಕು. ಈ ಮೂಲಕ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. </p>.<p>ಆದರೆ, ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದು ಜನರ ಆರೋಪ. </p>.<p>ಪಟ್ಟಣಕ್ಕೆ ಸಮೀಪವಿರುವ ಅಮಾನಿ ಭೈರಸಾಗರ ಕೆರೆಕಟ್ಟೆ ಮೇಲೆ ಸುಮಾರು 10 ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ಅನುದಾನದ ಅಡಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿತ್ತು. ಆದರೆ, ಈವರೆಗೆ ಈ ವಿದ್ಯುತ್ ಕಂಬಗಳಲ್ಲಿ ದೀಪಗಳೇ ಉರಿದಿಲ್ಲ ಎನ್ನುತ್ತಾರೆ ಜನಸಾಮಾನ್ಯರು. </p>.<p>ಆಂದಿನ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಯಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬೀದಿದೀಪಗಳನ್ನು ಅಳವಡಿಸಲಾಗಿದೆ. ಬೀದಿದೀಪ ಅಳವಡಿಸಿದ ಕೆಲವು ದಿನಗಳು ಮಾತ್ರ ಅವುಗಳು ಬೆಳಕು ನೀಡುತ್ತಿದ್ದವು. ಆದರೆ, ಆ ಬಳಿಕ ಸ್ಥಗಿತಗೊಂಡ ಬೀದಿದೀಪಗಳಲ್ಲಿ ಇಂದಿನವರೆಗೆ ಬೆಳಕು ಕಂಡಿಲ್ಲ. ಅವುಗಳನ್ನು ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜನರು ಆಗ್ರಹಿಸಿದ್ದಾರೆ. </p>.<p>ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್ ಮಾತನಾಡಿ, ಆ ಬೀದಿ ದೀಪಗಳನ್ನು ದುರಸ್ತಿ ಮಾಡಿಸಲು ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಸರ್ಕಾರದಿಂದ ಅನುದಾನ ಬಂದ ಕೂಡಲೇ ಅವುಗಳನ್ನು ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು. </p>.<p>ಕೆಡಿಪಿ ಸದಸ್ಯ ಎಚ್.ಪಿ. ಲಕ್ಷ್ಮಿನಾರಾಯಣ ಮಾತನಾಡಿ, ಕೆರೆಯು ಐತಿಹಾಸಿಕ ಪ್ರಸಿದ್ಧಿಯಾಗಿದೆ. ಕೆರೆಕಟ್ಟೆ ಮೇಲೆ ಅಳವಡಿಸಿರುವ ಬೀದಿದೀಪಗಳು ಕೆಟ್ಟು ನಿಂತಿದ್ದು, ಅವುಗಳನ್ನು ಪಟ್ಟಣ ಪಂಚಾಯಿತಿಯವರು ದುರಸ್ತಿಗೊಳಿಸಬೇಕು. ಈ ಮೂಲಕ ಅವುಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ಅಮಾನಿ ಭೈರಸಾಗರ ಕೆರೆಕಟ್ಟೆ ಮೇಲೆ ರಾತ್ರಿ ಹೊತ್ತಿನಲ್ಲಿ ಜನಸಾಮಾನ್ಯರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಆದರೆ, ಈ ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕವನ್ನೇ ಕಲ್ಪಿಸಲಾಗಿಲ್ಲ.</p>.<p>ಜೊತೆಗೆ ವಿದ್ಯುತ್ ಕಂಬಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣದಿಂದಾಗಿ ಅವು ತುಕ್ಕು ಹಿಡಿದಿದ್ದು, ಯಾವಾಗ ಬಿದ್ದು, ಅಪಾಯ ತಂದೊಡ್ಡಲಿವೆಯೇ ಎಂಬ ಭೀತಿ ಎದುರಾಗಿದೆ. ಹೀಗಾಗಿ, ಈ ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಬೇಕು. ಈ ಮೂಲಕ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. </p>.<p>ಆದರೆ, ವಿದ್ಯುತ್ ಕಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದು ಜನರ ಆರೋಪ. </p>.<p>ಪಟ್ಟಣಕ್ಕೆ ಸಮೀಪವಿರುವ ಅಮಾನಿ ಭೈರಸಾಗರ ಕೆರೆಕಟ್ಟೆ ಮೇಲೆ ಸುಮಾರು 10 ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ಅನುದಾನದ ಅಡಿ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿತ್ತು. ಆದರೆ, ಈವರೆಗೆ ಈ ವಿದ್ಯುತ್ ಕಂಬಗಳಲ್ಲಿ ದೀಪಗಳೇ ಉರಿದಿಲ್ಲ ಎನ್ನುತ್ತಾರೆ ಜನಸಾಮಾನ್ಯರು. </p>.<p>ಆಂದಿನ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಯಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬೀದಿದೀಪಗಳನ್ನು ಅಳವಡಿಸಲಾಗಿದೆ. ಬೀದಿದೀಪ ಅಳವಡಿಸಿದ ಕೆಲವು ದಿನಗಳು ಮಾತ್ರ ಅವುಗಳು ಬೆಳಕು ನೀಡುತ್ತಿದ್ದವು. ಆದರೆ, ಆ ಬಳಿಕ ಸ್ಥಗಿತಗೊಂಡ ಬೀದಿದೀಪಗಳಲ್ಲಿ ಇಂದಿನವರೆಗೆ ಬೆಳಕು ಕಂಡಿಲ್ಲ. ಅವುಗಳನ್ನು ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜನರು ಆಗ್ರಹಿಸಿದ್ದಾರೆ. </p>.<p>ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕಾಸ್ ಮಾತನಾಡಿ, ಆ ಬೀದಿ ದೀಪಗಳನ್ನು ದುರಸ್ತಿ ಮಾಡಿಸಲು ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಸರ್ಕಾರದಿಂದ ಅನುದಾನ ಬಂದ ಕೂಡಲೇ ಅವುಗಳನ್ನು ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು. </p>.<p>ಕೆಡಿಪಿ ಸದಸ್ಯ ಎಚ್.ಪಿ. ಲಕ್ಷ್ಮಿನಾರಾಯಣ ಮಾತನಾಡಿ, ಕೆರೆಯು ಐತಿಹಾಸಿಕ ಪ್ರಸಿದ್ಧಿಯಾಗಿದೆ. ಕೆರೆಕಟ್ಟೆ ಮೇಲೆ ಅಳವಡಿಸಿರುವ ಬೀದಿದೀಪಗಳು ಕೆಟ್ಟು ನಿಂತಿದ್ದು, ಅವುಗಳನ್ನು ಪಟ್ಟಣ ಪಂಚಾಯಿತಿಯವರು ದುರಸ್ತಿಗೊಳಿಸಬೇಕು. ಈ ಮೂಲಕ ಅವುಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>