<p><strong>ಗುಡಿಬಂಡೆ</strong>: ಸ್ಥಳೀಯ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ.</p>.<p>ಅಧ್ಯಕ್ಷ ಸ್ಥಾನಕ್ಕೆ ವಿಕಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಸಿಗ್ಬತ್ತುಲ್ಲಾ ತಿಳಿಸಿದರು.</p>.<p>ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಅದರಂತೆ ಸೆ. 25ರಂದು ಚುನಾವಣೆ ಘೋಷಣೆಯಾಗಿ ಅಧ್ಯಕ್ಷ ವಿಕಾಸ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು ಇಬ್ಬರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು.</p>.<p>ಚುನಾವಣೆಗೆ ಪಕ್ಷೇತರ ಸದಸ್ಯ ರಾಜೇಶ್, ಜೆಡಿಎಸ್ನ ಬಷೀರ್ ಹಾಗೂ ಅನುಷಾ ಗೈರಾಗಿದ್ದರು. </p>.<p>ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ‘ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದ ಕಾರಣ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಎಲ್ಲರ ಮನವೊಲಿಸಿ ವಿಕಾಸ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗಂಗರಾಜು ಅವರನ್ನು ಆಯ್ಕೆ ಮಾಡಲಾಗಿದೆ’ ಎಂದರು.</p>.<p>ನೂತನ ಅಧ್ಯಕ್ಷ ವಿಕಾಸ್ ಮಾತನಾಡಿ, ‘ಶಾಸಕರ ಮಾರ್ಗದರ್ಶನದಂತೆ ಪಟ್ಟಣ ಪಂಚಾಯಿತಿಯನ್ನು ಅಭಿವೃದ್ಧಿ ಮಾಡುತ್ತೇವೆ’ ಎಂದರು.</p>.<p>ಸದಸ್ಯ ಇಸ್ಮಾಯಿಲ್ ಆಜಾದ್, ಮಂಜುಳ, ರಾಜೇಶ್, ವೀಣಾ, ನಗೀನ್ ತಾಜ್, ಬಷೀರಾ, ಮುಖಂಡ ಆದಿರೆಡ್ಡಿ, ಎಚ್.ಪಿ.ಲಕ್ಷ್ಮಿನಾರಾಯಣ, ಮಂಜುನಾಥ್, ರಿಯಾಜ್, ತಿರುಮಣಿ ಮಂಜುನಾಥ್, ರಮೇಶ್, ಅಜಯ್, ಸಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ಸ್ಥಳೀಯ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ.</p>.<p>ಅಧ್ಯಕ್ಷ ಸ್ಥಾನಕ್ಕೆ ವಿಕಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಸಿಗ್ಬತ್ತುಲ್ಲಾ ತಿಳಿಸಿದರು.</p>.<p>ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಅದರಂತೆ ಸೆ. 25ರಂದು ಚುನಾವಣೆ ಘೋಷಣೆಯಾಗಿ ಅಧ್ಯಕ್ಷ ವಿಕಾಸ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು ಇಬ್ಬರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು.</p>.<p>ಚುನಾವಣೆಗೆ ಪಕ್ಷೇತರ ಸದಸ್ಯ ರಾಜೇಶ್, ಜೆಡಿಎಸ್ನ ಬಷೀರ್ ಹಾಗೂ ಅನುಷಾ ಗೈರಾಗಿದ್ದರು. </p>.<p>ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ‘ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದ ಕಾರಣ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಎಲ್ಲರ ಮನವೊಲಿಸಿ ವಿಕಾಸ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗಂಗರಾಜು ಅವರನ್ನು ಆಯ್ಕೆ ಮಾಡಲಾಗಿದೆ’ ಎಂದರು.</p>.<p>ನೂತನ ಅಧ್ಯಕ್ಷ ವಿಕಾಸ್ ಮಾತನಾಡಿ, ‘ಶಾಸಕರ ಮಾರ್ಗದರ್ಶನದಂತೆ ಪಟ್ಟಣ ಪಂಚಾಯಿತಿಯನ್ನು ಅಭಿವೃದ್ಧಿ ಮಾಡುತ್ತೇವೆ’ ಎಂದರು.</p>.<p>ಸದಸ್ಯ ಇಸ್ಮಾಯಿಲ್ ಆಜಾದ್, ಮಂಜುಳ, ರಾಜೇಶ್, ವೀಣಾ, ನಗೀನ್ ತಾಜ್, ಬಷೀರಾ, ಮುಖಂಡ ಆದಿರೆಡ್ಡಿ, ಎಚ್.ಪಿ.ಲಕ್ಷ್ಮಿನಾರಾಯಣ, ಮಂಜುನಾಥ್, ರಿಯಾಜ್, ತಿರುಮಣಿ ಮಂಜುನಾಥ್, ರಮೇಶ್, ಅಜಯ್, ಸಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>