<p><strong>ಗುಡಿಬಂಡೆ:</strong> ವಿಶ್ವ ಹಾಲು ದಿನ ಹಾಗೂ ದಿವಂಗತ ಎಂ.ವಿ. ಕೃಷ್ಣಪ್ಪ ಅವರ ಜನ್ಮದಿನಾಚರಣೆಯು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆಯಿತು.</p>.<p>ರೈತರ ಜೀವನಾಡಿಯಾದ ನಂದಿನಿ ಉತ್ಪನ್ನಗಳನ್ನು ಬಳಕೆ ಮಾಡುವ ಮೂಲಕ ರೈತರು ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕೆಂದು ಚಿಮುಲ್ ನಿರ್ದೇಶಕ ಆದಿನಾರಾಯಣರೆಡ್ಡಿ ತಿಳಿಸಿದರು.</p>.<p>ಉಪ ವ್ಯವಸ್ಥಾಪಕಿ ಡಾ. ನವ್ಯಶ್ರೀ ಮಾತನಾಡಿ, ಹುಟ್ಟಿದ ಮಗುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೆ ಹಾಲು ಪೌಷ್ಟಿಕ ಆಹಾರವಾಗಿದೆ. ಆದ್ದರಿಂದ ಪ್ರತಿ ವರ್ಷದ ಜೂನ್ 1ರಂದು ವಿಶ್ವ ಹಾಲು ದಿನ ಆಚರಿಸಲಾಗುತ್ತದೆ ಎಂದರು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಲಕ್ಷ್ಮಿನಾರಾಯಣ, ಚಿಮುಲ್ ಶಿಬಿರ ಕಚೇರಿ ವಿಸ್ತರಣಾಧಿಕಾರಿ ಎಚ್.ಎಸ್. ಉಮೇಶ್ ರೆಡ್ಡಿ, ಎಂ.ವಿ. ಧರಣಿ ಕುಮಾರ್, ಮೋಹನ್, ಎಚ್.ಎನ್. ಚಂದ್ರಶೇಖರರೆಡ್ಡಿ, ರಹಮತ್ವುಲ್ಲಾ, ಪದಾಧಿಕಾರಿಗಳಾದ ಕೆ.ವಿ.ಕೃಷ್ಣಾರೆಡ್ಡಿ, ಬಿ.ಸಿ. ವೆಂಕಟೇಶ್, ಶ್ರೀನಿವಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-1458879138</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ವಿಶ್ವ ಹಾಲು ದಿನ ಹಾಗೂ ದಿವಂಗತ ಎಂ.ವಿ. ಕೃಷ್ಣಪ್ಪ ಅವರ ಜನ್ಮದಿನಾಚರಣೆಯು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆಯಿತು.</p>.<p>ರೈತರ ಜೀವನಾಡಿಯಾದ ನಂದಿನಿ ಉತ್ಪನ್ನಗಳನ್ನು ಬಳಕೆ ಮಾಡುವ ಮೂಲಕ ರೈತರು ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕೆಂದು ಚಿಮುಲ್ ನಿರ್ದೇಶಕ ಆದಿನಾರಾಯಣರೆಡ್ಡಿ ತಿಳಿಸಿದರು.</p>.<p>ಉಪ ವ್ಯವಸ್ಥಾಪಕಿ ಡಾ. ನವ್ಯಶ್ರೀ ಮಾತನಾಡಿ, ಹುಟ್ಟಿದ ಮಗುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೆ ಹಾಲು ಪೌಷ್ಟಿಕ ಆಹಾರವಾಗಿದೆ. ಆದ್ದರಿಂದ ಪ್ರತಿ ವರ್ಷದ ಜೂನ್ 1ರಂದು ವಿಶ್ವ ಹಾಲು ದಿನ ಆಚರಿಸಲಾಗುತ್ತದೆ ಎಂದರು.</p>.<p>ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಲಕ್ಷ್ಮಿನಾರಾಯಣ, ಚಿಮುಲ್ ಶಿಬಿರ ಕಚೇರಿ ವಿಸ್ತರಣಾಧಿಕಾರಿ ಎಚ್.ಎಸ್. ಉಮೇಶ್ ರೆಡ್ಡಿ, ಎಂ.ವಿ. ಧರಣಿ ಕುಮಾರ್, ಮೋಹನ್, ಎಚ್.ಎನ್. ಚಂದ್ರಶೇಖರರೆಡ್ಡಿ, ರಹಮತ್ವುಲ್ಲಾ, ಪದಾಧಿಕಾರಿಗಳಾದ ಕೆ.ವಿ.ಕೃಷ್ಣಾರೆಡ್ಡಿ, ಬಿ.ಸಿ. ವೆಂಕಟೇಶ್, ಶ್ರೀನಿವಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-1458879138</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>