ಶಿಡ್ಲಘಟ್ಟ: ಗುರುಪೂರ್ಣಿಮೆ ಅಂಗವಾಗಿ ಶನಿವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು.
ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿ ಮಾಡಲಾಯಿತು. ಸುದರ್ಶನ ಹೋಮ, ಲಕ್ಷ್ಮೀನರಸಿಂಹಸ್ವಾಮಿ ಹೋಮ, ಸಾಯಿ ಹೋಮ, ಧನ್ವಂತರಿ ಹೋಮ ಮತ್ತು ಸತ್ಯನಾರಾಯಣ ಪೂಜೆ ನಡೆಸಲಾಯಿತು.
ಸಂಜೆ ಘಂಟಸಾಲ ಗಾನ ಕಲಾ ವೃಂದದವರಿಂದ ಭಕ್ತಿಗೀತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.