‘ನಮ್ಮ ಗ್ರಾಮದಿಂದ 5 ಕಿ.ಮೀ ದೂರ ನಡೆದು ರಸ್ತೆಗೆ ಬರಬೇಕಾಗಿದೆ. ಮಕ್ಕಳು ಶಾಲೆಗೆ ಕಳಿಸುವುದಕ್ಕೂ ತೊಂದರೆಯಾಗಿದೆ. ಆಟೋ ಗೆ ₹150 ನೀಡಿ ಮಕ್ಕನ್ನು ಶಾಲೆಗೆ ಕಳುಹಿಸುತ್ತಿದ್ದೇನೆ. ಈ ವರ್ಷವಾದರೂ ಕೊಡುತ್ತಾರೆ ಎಂಬ ನಂಬಿಕೆ ಇತ್ತು. ಈ ವರ್ಷವೂ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಟ್ಟಿರುವುದರಿಂದ ನ್ಯಾಯಕ್ಕಾಗಿ ಧರಣಿ ಕುಳಿತಿದ್ದೇನೆ’ ಎಂದು ಅವರು ತಿಳಿಸಿದರು.