ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಮಾತನಾಡಿ, ‘ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಕಾರ್ಯಾಚರಣೆಗಾಗಿ ರಚಿಸಿರುವ ಅಂತರ್ ಜಿಲ್ಲಾ, ಅಂತರ್ ರಾಜ್ಯ ಹಾಗೂ ಅಂತರ್ ತಾಲ್ಲೂಕು ಚೆಕ್ಪೋಸ್ಟ್ ಸಿಬ್ಬಂದಿ ಮತ್ತು ನಿರ್ಗತಿಕರಿಗೆ, ವಸತಿರಹಿತರಿಗೆ, ವಲಸೆ ಬಂದ ಕಾರ್ಮಿಕರಿಗೆ ವಸತಿ, ಊಟದ ವ್ಯವಸ್ಥೆ, ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ’ ಎಂದರು.