ನಂಜನಗೂಡು: ವರುಣಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಾ.ಎಚ್.ಮಹದೇವಪ್ಪ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರಿಗೆ ಕ್ರೇನ್ ಮೂಲಕ ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ‘ಕಾಂಗ್ರೆಸ್ ಬಡವರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.
‘ಮುಂದೆ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ. ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಬಸವಣ್ಣ ಅವರ ಸಮಾನತೆ ತತ್ವದಡಿಯಲ್ಲಿ ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ’ ಎಂದರು.
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕ್ಷೇತ್ರದಲ್ಲಿ ಪುತ್ರ ಯತೀಂದ್ರ ಅವರನ್ನು ಆಶೀರ್ವದಿಸಬೇಕು ಎಂದು ಅವರು ಮನವಿ ಮಾಡಿದರು.
ಪಂ ಸದಸ್ಯ ಎಚ್.ಎನ್.ನಂಜಪ್ಪ, ಮುಖಂಡರಾದ ಗುರುಪಾದಸ್ವಾಮಿ, ಎಚ್.ಸಿ.ನಿಂಗಯ್ಯ, ಪ್ರಮೋದ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಗುರುಮಲ್ಲಪ್ಪ, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಟಿ.ಕೆ. ಮಾಲೇಗೌಡ, ಹಳ್ಳಿಕೆರೆ ಹುಂಡಿ ಚಿನ್ನಸ್ವಾಮಿ ಉಪಸ್ಥಿತರಿದ್ದರು.