<p><strong>ಸಾದಲಿ: </strong>‘ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗಾಗಿ ಬೆಂಬಲ ನೀಡಿದ್ದ ಕಾಂಗ್ರೆಸ್ ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಮಾಡಲು ನಿರಾಕರಿಸಿತ್ತು. ಆದಾಗ್ಯೂ, ನಾನು₹ 25,000 ಕೋಟಿ ಸಾಲಮನ್ನಾ ಮಾಡಿದ್ದೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆ ಹಾಗೂ ಹಿರಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ ಸಾಲಮನ್ನಾ ಮಾಡಿದ್ದೆ. ಇದರಿಂದ 26 ಸಾವಿರ ಆದರೆ, ಇದೀಗ ಈ ಸಾಲಮನ್ನಾದಲ್ಲಿ ತಮಗೂ ಪಾಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷದಲ್ಲಿ 500 ಪದವಿ ಪೂರ್ವ ಕಾಲೇಜುಗಳು,179 ಪ್ರಥಮ ದರ್ಜೆ ಕಾಲೇಜುಗಳು ಹಾಗೂ 1,400 ಪ್ರೌಢ ಶಾಲೆ ಸ್ಥಾಪಿಸಿದ್ದೇನೆ. ಆದರೆ ಈಗ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು<br />ಕಾಣುತ್ತಿದೆ. ಹಲವು ಶಾಲೆಗಳುಶಿಥಿಲಾವಸ್ಥೆಗೆ ತಲುಪಿವೆ. ಪರಿಸ್ಥಿತಿಹೀಗಿದ್ದಾಗ ಬಡವರಿಗೆ ಶಿಕ್ಷಣದೊರೆಯುವುದು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>ಹಳ್ಳಿ ಪ್ರದೇಶಗಳಲ್ಲಿ ಆರೋಗ್ಯ ಸಲುವಾಗಿ 6,000 ಗ್ರಾಮ ಪಂಚಾಯ್ತಿಗಳಲ್ಲಿ ಸುಸಜ್ಜಿತವಾದ 30 ಹಾಸಿಗೆಗಳಿರುವ ಹಾಗೂ ಉತ್ತಮ ಪ್ರಯೋಗಗಳನ್ನು ಒಳಗೊಂಡ ಆರೋಗ್ಯ ಕೇಂದ್ರ ಸ್ಥಾಪಿಸುವುದು ಪಂಚರತ್ನ ಯೋಜನೆಯ 2ನೇ ಗುರಿ.</p>.<p>ಪಕ್ಕದ ತೆಲಂಗಾಣ ರೈತರಿಗೆ ಒಂದು ಎಕರೆಗೆ ಬೆಳೆ ಬಿತ್ತನೆಗೆ ₹10 ಸಾವಿರ ನೀಡಲಾಗುತ್ತಿದೆ. ನಾವು ಅಧಿಕಾರಕ್ಕೆಬಂದರೆ, ಅದೇ ರೀತಿ ಯೋಜನೆಯನ್ನೂ ರಾಜ್ಯದಲ್ಲೂ ಜಾರಿಗೆ ತರುತ್ತೇವೆ ಎಂದರು. ಜತೆಗೆ ಪ್ರತಿ ರೈತರಿಗೂ ಮುಂಗಾರಿನಲ್ಲಿ ಅವರ ಖಾತೆಗಳಿಗೆ ಹಣ ಹಾಕುವ ವ್ಯವಸ್ಥೆ ಮಾಡುತ್ತೇವೆ ಎಂದರು.</p>.<p>‘ರಾಜ್ಯದ ಎಲ್ಲ ಜಿಲ್ಲೆಯಲ್ಲಿ ನಡೆಯುವ ರಥಯಾತ್ರೆ ಕಾರ್ಯಕ್ರಮಕ್ಕೆ ಹೋಗುವ ಪ್ರಯತ್ನ ಮಾಡುತ್ತೇನೆ. ‘ಪಂಚರತ್ನ ರಥಯಾತ್ರೆ ಯಾವ ಜಾತಿಗೂ ಸೇರಿದ್ದು ಅಲ್ಲ. ಜಾತಿ ಭೇದವೂ ಇಲ್ಲ. ಈ ಕಾರ್ಯಕ್ರಮ ಹಳ್ಳಿ ಹಳ್ಳಿಗೆ ಹೋಗಿ ಜನರ ಮನಸ್ಸಿಗೆ ನಾಟುವಂತಿರಬೇಕು’ ಎಂದರು.</p>.<p>ಜೆಡಿಎಸ್ ಮುಖಂಡ ಮೇಲೂರು ರವಿ ದೇವೇಗೌಡರ ಸಾಧನೆಗಳ ಸಾಧನೆಯ ಶಿಖಾರೋಹಣ ಪುಸ್ತಕವನ್ನು ಎಲ್ಲರಿಗೆ ಹಂಚಿದರು.</p>.<p><strong>‘ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಬಿಜೆಪಿಯ ಜಂಟಿ ಸರ್ಕಾರ’</strong><br />‘ಪಂಚರಥ್ನ ಯಾತ್ರೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಆದರೆ, ಈ ಯಾತ್ರೆ ಮೂಲಕ ನಾನು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಭಾಗ್ಯಗಳಿಂದ ಬಡ ಕುಟುಂಬಗಳು ಬದುಕಲು ಆಗಲಿಲ್ಲ’ ಎಂದು ಟೀಕಿಸಿದರು.</p>.<p>‘ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ನಡೆಸುತ್ತಿದ್ದಾರೆ, ಅವಕಾಶವಾದಿ ರಾಜಕಾರಣಿ ಎಂದು ಟೀಕಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಮತ್ತು ಬಿಜೆಪಿಯ ಜಂಟಿ ಸರ್ಕಾರ. ಈಗ ಈ ಸರ್ಕಾರವನ್ನು ಸಿದ್ದರಾಮಯ್ಯ ಲಜ್ಜೆಗೆಟ್ಟ ಸರ್ಕಾರ ಎಂದು ಟೀಕಿಸುತ್ತಿದ್ದಾರೆ. ಆದರೆ, ಈ ಸರ್ಕಾರವನ್ನು ತಂದವರು ಯಾರು’ ಎಂದು ಪ್ರಶ್ನಿಸಿದರು.</p>.<p>2023ರಲ್ಲಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಿ ಪಂಚರತ್ನ ಯೋಜನೆ ಜಾರಿ ಮಾಡದಿದ್ದರೆ, ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾದಲಿ: </strong>‘ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗಾಗಿ ಬೆಂಬಲ ನೀಡಿದ್ದ ಕಾಂಗ್ರೆಸ್ ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಮಾಡಲು ನಿರಾಕರಿಸಿತ್ತು. ಆದಾಗ್ಯೂ, ನಾನು₹ 25,000 ಕೋಟಿ ಸಾಲಮನ್ನಾ ಮಾಡಿದ್ದೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆ ಹಾಗೂ ಹಿರಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ವಿರೋಧ ಲೆಕ್ಕಿಸದೆ ರೈತರ ಸಾಲಮನ್ನಾ ಮಾಡಿದ್ದೆ. ಇದರಿಂದ 26 ಸಾವಿರ ಆದರೆ, ಇದೀಗ ಈ ಸಾಲಮನ್ನಾದಲ್ಲಿ ತಮಗೂ ಪಾಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ’ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷದಲ್ಲಿ 500 ಪದವಿ ಪೂರ್ವ ಕಾಲೇಜುಗಳು,179 ಪ್ರಥಮ ದರ್ಜೆ ಕಾಲೇಜುಗಳು ಹಾಗೂ 1,400 ಪ್ರೌಢ ಶಾಲೆ ಸ್ಥಾಪಿಸಿದ್ದೇನೆ. ಆದರೆ ಈಗ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು<br />ಕಾಣುತ್ತಿದೆ. ಹಲವು ಶಾಲೆಗಳುಶಿಥಿಲಾವಸ್ಥೆಗೆ ತಲುಪಿವೆ. ಪರಿಸ್ಥಿತಿಹೀಗಿದ್ದಾಗ ಬಡವರಿಗೆ ಶಿಕ್ಷಣದೊರೆಯುವುದು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>ಹಳ್ಳಿ ಪ್ರದೇಶಗಳಲ್ಲಿ ಆರೋಗ್ಯ ಸಲುವಾಗಿ 6,000 ಗ್ರಾಮ ಪಂಚಾಯ್ತಿಗಳಲ್ಲಿ ಸುಸಜ್ಜಿತವಾದ 30 ಹಾಸಿಗೆಗಳಿರುವ ಹಾಗೂ ಉತ್ತಮ ಪ್ರಯೋಗಗಳನ್ನು ಒಳಗೊಂಡ ಆರೋಗ್ಯ ಕೇಂದ್ರ ಸ್ಥಾಪಿಸುವುದು ಪಂಚರತ್ನ ಯೋಜನೆಯ 2ನೇ ಗುರಿ.</p>.<p>ಪಕ್ಕದ ತೆಲಂಗಾಣ ರೈತರಿಗೆ ಒಂದು ಎಕರೆಗೆ ಬೆಳೆ ಬಿತ್ತನೆಗೆ ₹10 ಸಾವಿರ ನೀಡಲಾಗುತ್ತಿದೆ. ನಾವು ಅಧಿಕಾರಕ್ಕೆಬಂದರೆ, ಅದೇ ರೀತಿ ಯೋಜನೆಯನ್ನೂ ರಾಜ್ಯದಲ್ಲೂ ಜಾರಿಗೆ ತರುತ್ತೇವೆ ಎಂದರು. ಜತೆಗೆ ಪ್ರತಿ ರೈತರಿಗೂ ಮುಂಗಾರಿನಲ್ಲಿ ಅವರ ಖಾತೆಗಳಿಗೆ ಹಣ ಹಾಕುವ ವ್ಯವಸ್ಥೆ ಮಾಡುತ್ತೇವೆ ಎಂದರು.</p>.<p>‘ರಾಜ್ಯದ ಎಲ್ಲ ಜಿಲ್ಲೆಯಲ್ಲಿ ನಡೆಯುವ ರಥಯಾತ್ರೆ ಕಾರ್ಯಕ್ರಮಕ್ಕೆ ಹೋಗುವ ಪ್ರಯತ್ನ ಮಾಡುತ್ತೇನೆ. ‘ಪಂಚರತ್ನ ರಥಯಾತ್ರೆ ಯಾವ ಜಾತಿಗೂ ಸೇರಿದ್ದು ಅಲ್ಲ. ಜಾತಿ ಭೇದವೂ ಇಲ್ಲ. ಈ ಕಾರ್ಯಕ್ರಮ ಹಳ್ಳಿ ಹಳ್ಳಿಗೆ ಹೋಗಿ ಜನರ ಮನಸ್ಸಿಗೆ ನಾಟುವಂತಿರಬೇಕು’ ಎಂದರು.</p>.<p>ಜೆಡಿಎಸ್ ಮುಖಂಡ ಮೇಲೂರು ರವಿ ದೇವೇಗೌಡರ ಸಾಧನೆಗಳ ಸಾಧನೆಯ ಶಿಖಾರೋಹಣ ಪುಸ್ತಕವನ್ನು ಎಲ್ಲರಿಗೆ ಹಂಚಿದರು.</p>.<p><strong>‘ರಾಜ್ಯದಲ್ಲಿರುವುದು ಸಿದ್ದರಾಮಯ್ಯ, ಬಿಜೆಪಿಯ ಜಂಟಿ ಸರ್ಕಾರ’</strong><br />‘ಪಂಚರಥ್ನ ಯಾತ್ರೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಆದರೆ, ಈ ಯಾತ್ರೆ ಮೂಲಕ ನಾನು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಭಾಗ್ಯಗಳಿಂದ ಬಡ ಕುಟುಂಬಗಳು ಬದುಕಲು ಆಗಲಿಲ್ಲ’ ಎಂದು ಟೀಕಿಸಿದರು.</p>.<p>‘ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ನಡೆಸುತ್ತಿದ್ದಾರೆ, ಅವಕಾಶವಾದಿ ರಾಜಕಾರಣಿ ಎಂದು ಟೀಕಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಮತ್ತು ಬಿಜೆಪಿಯ ಜಂಟಿ ಸರ್ಕಾರ. ಈಗ ಈ ಸರ್ಕಾರವನ್ನು ಸಿದ್ದರಾಮಯ್ಯ ಲಜ್ಜೆಗೆಟ್ಟ ಸರ್ಕಾರ ಎಂದು ಟೀಕಿಸುತ್ತಿದ್ದಾರೆ. ಆದರೆ, ಈ ಸರ್ಕಾರವನ್ನು ತಂದವರು ಯಾರು’ ಎಂದು ಪ್ರಶ್ನಿಸಿದರು.</p>.<p>2023ರಲ್ಲಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಿ ಪಂಚರತ್ನ ಯೋಜನೆ ಜಾರಿ ಮಾಡದಿದ್ದರೆ, ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>