<p><strong>ಚಿಕ್ಕಬಳ್ಳಾಪುರ:</strong> ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಆರಂಭವಾದ ಮಳೆ ಸಂಜೆಯವರೆಗೂ ಧಾರಾಕಾರವಾಗಿ ಸುರಿಯಿತು.</p>.<p>ಮಳೆಯಿಂದ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಯಿತು. ಕಳೆದ ಎರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಮಂಗಳವಾರ ಮಧ್ಯಾಹ್ನವೇ ಬೋರ್ಗರೆಯಿತು.</p>.<p>ಗ್ರಾಮೀಣ ಪ್ರದೇಶಗಳ ಹೊಲಗಳಲ್ಲಿ, ತೋಟಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಲುಗಡೆಯಾಗಿತ್ತು. ಶಾಲೆಗಳಿಂದ ಮನೆಗಳಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳು ಹೈರಾಣಾಗುವಂತೆ ಮಾಡಿತ್ತು. ನಿರಂತರವಾಗಿ ಸುರಿದ ಮಳೆಯಿಂದ ರಸ್ತೆ, ಚರಂಡಿಗಳು ಮಳೆ ನೀರಿನಿಂದ ಆವೃತವಾದವು.</p>.<p>ಅನಿವಾರ್ಯವಾಗಿ ಹೊರ ಹೋಗಬೇಕಾದ ಜನರು ಕೊಡೆಗಳಿಗೆ ಮೊರೆ ಹೋದರು. ಅಲ್ಲದೆ ವಿವಿಧ ಕೆಲಸಗಳಿಗಾಗಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದಿದ್ದ ಜನರು ಮಳೆಯಿಂದ ಆಶ್ರಯ ಪಡೆಯಲು <br />ಹೆಣಗಿದರು.</p>.<p>ನಿರಂತರ ಮಳೆಯಿಂದ ಬೀದಿ ಬದಿ ವ್ಯಾಪಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ನಗರದ ಬಹುತೇಕ ವಾರ್ಡ್ಗಳಲ್ಲಿ ವಿದ್ಯುತ್ ವ್ಯತ್ಯಯವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಆರಂಭವಾದ ಮಳೆ ಸಂಜೆಯವರೆಗೂ ಧಾರಾಕಾರವಾಗಿ ಸುರಿಯಿತು.</p>.<p>ಮಳೆಯಿಂದ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಯಿತು. ಕಳೆದ ಎರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಮಂಗಳವಾರ ಮಧ್ಯಾಹ್ನವೇ ಬೋರ್ಗರೆಯಿತು.</p>.<p>ಗ್ರಾಮೀಣ ಪ್ರದೇಶಗಳ ಹೊಲಗಳಲ್ಲಿ, ತೋಟಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಲುಗಡೆಯಾಗಿತ್ತು. ಶಾಲೆಗಳಿಂದ ಮನೆಗಳಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳು ಹೈರಾಣಾಗುವಂತೆ ಮಾಡಿತ್ತು. ನಿರಂತರವಾಗಿ ಸುರಿದ ಮಳೆಯಿಂದ ರಸ್ತೆ, ಚರಂಡಿಗಳು ಮಳೆ ನೀರಿನಿಂದ ಆವೃತವಾದವು.</p>.<p>ಅನಿವಾರ್ಯವಾಗಿ ಹೊರ ಹೋಗಬೇಕಾದ ಜನರು ಕೊಡೆಗಳಿಗೆ ಮೊರೆ ಹೋದರು. ಅಲ್ಲದೆ ವಿವಿಧ ಕೆಲಸಗಳಿಗಾಗಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದಿದ್ದ ಜನರು ಮಳೆಯಿಂದ ಆಶ್ರಯ ಪಡೆಯಲು <br />ಹೆಣಗಿದರು.</p>.<p>ನಿರಂತರ ಮಳೆಯಿಂದ ಬೀದಿ ಬದಿ ವ್ಯಾಪಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ನಗರದ ಬಹುತೇಕ ವಾರ್ಡ್ಗಳಲ್ಲಿ ವಿದ್ಯುತ್ ವ್ಯತ್ಯಯವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>