ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮುಂದುವರಿದ ಮಳೆ ಆರ್ಭಟ

Last Updated 6 ಸೆಪ್ಟೆಂಬರ್ 2022, 4:53 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಚಿಕ್ಕಬಳ್ಳಾಪುರ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾರಿ ಮಳೆ ಸುರಿಯಿತು.

ಸೋಮವಾರ ರಾತ್ರಿ 7.30ರಿಂದ ಮತ್ತೆ ಮಳೆ ಆರಂಭವಾಯಿತು. ರಾತ್ರಿಯವರೆಗೂ ಉತ್ತಮ ಮಳೆ ಸುರಿಯಿತು.

ಜಿಲ್ಲೆಯ ಪ್ರಮುಖ ಕೆರೆಗಳಲ್ಲಿ ಒಂದಾದ ಚಿಕ್ಕಬಳ್ಳಾಪುರದ ಅಮಾನಿ ಗೋಪಾಲಕೃಷ್ಣಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕೋಡಿ ನೀರು ಹರಿಯುತ್ತಿರುವ ಸುತ್ತಲಿನ ಹೊಲಗಳು ಜಲಾವೃತವಾಗಿವೆ.

ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕೆರೆ, ಕಟ್ಟೆಗಳು, ಚೆಕ್‌ಡ್ಯಾಂಗಳು ತುಂಬಿವೆ. ಯಾವ ಹಳ್ಳಿಗಳಲ್ಲಿ ನೋಡಿದರೂ ನೀರು ತುಂಬಿ ತುಳುಕುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT