ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹಾಗೂ ಮಂಚೇನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಿಗ್ಗೆ ಸುರಿದ ಮಳೆಗೆ ಉತ್ತರ ಪಿನಾಕಿನಿ ನದಿ ಮೈದುಂಬಿದೆ.
ಐದಾರು ವರ್ಷಗಳ ಬಳಿಕ ನದಿಯಲ್ಲಿ ನೀರು ಕಂಡು ಸ್ಥಳೀಯರು ಸಂತಸಗೊಂಡಿದ್ದಾರೆ.
ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಬೆಳಿಗ್ಗೆ ಚಿಕ್ಕಬಳ್ಳಾಪುರ ಸಮೀಪವಿರುವ ಪಿನಾಕಿನಿ ನದಿಯನ್ನು ವೀಕ್ಷಿಸಿದರು.