‘ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರದ 56 ಕಿ.ಮೀ. ಮಾರ್ಗದ ರಸ್ತೆ ಕಾಮಗಾರಿ ಅಭಿವೃದ್ಧಿಯನ್ನು ಈ ಹಿಂದೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ದಿವಾಳಿಯಾಗಿದ್ದೇನೆ ಎಂದು ಘೋಷಿಸಿಕೊಂಡ ಕಾರಣ ಕಾಮಗಾರಿ ಸ್ಥಗಿತಗೊಂಡಿತು. ಪ್ರಸ್ತುತ ಈ ಕಾಮಗಾರಿ ಅಭಿವೃದ್ಧಿಗಾಗಿ ₹13 ಕೋಟಿ ಇದ್ದು, ಇನ್ನೂ ಹೆಚ್ಚುವರಿಯಾಗಿ ₹17 ಕೋಟಿ ಅನುದಾನ ಬೇಕಾಗಿದೆ. ಈ ಹಣವನ್ನು ಹೆದ್ದಾರಿ ಪ್ರಾಧಿಕಾರವು ಕೊಡುವುದಾಗಿ ಒಪ್ಪಿಕೊಂಡಿದ್ದು, ಎರಡೂ ಸೇರಿ ಒಟ್ಟು ₹30 ಕೋಟಿ ವೆಚ್ಚದಲ್ಲಿ ಮುಂದಿನ ಮೇ ಇಲ್ಲವೇ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.