<p><strong>ಚಿಂತಾಮಣಿ</strong>: ಉತ್ತರ ಭಾರತದ ಪ್ರವಾಸಕ್ಕೆ ತೆರಳಿದ್ದ ನಗರದ ಎರಡು ವರ್ತಕರ ಕುಟುಂಬಗಳ ಆರು ಮಂದಿ ಹಿಮಾಚಲ ಪ್ರದೇಶದ ಪ್ರವಾಹದಲ್ಲಿ ಸಿಲುಕಿದ್ದಾರೆ. </p>.<p>ಟ್ರಾವೆಲ್ ಏಜೆನ್ಸಿಯೊಂದು ರಾಜ್ಯದ 105 ಮಂದಿಯನ್ನು ಉತ್ತರ ಭಾರತದ ಪ್ರವಾಸಕ್ಕೆ ಕರೆದುಕೊಂಡು ಹೋಗಿದೆ. ಇದರಲ್ಲಿ ನಗರದ ಗ್ರೇಟ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಮಾಲೀಕ ಸುಜಯ್ ಕುಮಾರ್, ಪತ್ನಿ, ಮಗಳು ಮತ್ತು ಚೌಡೇಶ್ವರಿ ಎಲೆಕ್ಟ್ರಾನಿಕ್ಸ್ ಮಾಲೀಕ ರಘುನಾಥರೆಡ್ಡಿ ಕುಟುಂಬದ ಮೂವರು ಪ್ರವಾಸಕ್ಕೆ ತೆರಳಿದ್ದಾರೆ. </p>.<p>ಭಾನುವಾರ ಕುಲು ಮನಾಲಿಯ ಪಂಚತಾರಾ ಹೋಟೆಲ್ನಲ್ಲಿ ಈ ಕುಟುಂಬಗಳು ತಂಗಿವೆ. ಹಿಮಾಚಲ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಹೋಟೆಲ್ನ ನೆಲ ಅಂತಸ್ತಿಗೆ ಮಳೆ ನೀರು ನುಗ್ಗಿದೆ.</p>.<p>‘ಹೋಟೆಲ್ನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. ವಿದ್ಯುತ್, ಅಂತರ್ಜಾಲ ಸಂಪರ್ಕ ಕಡಿತಗೊಂಡಿದೆ. ಊಟ, ತಿಂಡಿಗೂ ಪರದಾಡುವಂತಾಗಿದೆ’ ಎಂದು ಸುಜಯ್ ಕುಮಾರ್ ಸೋಮವಾರ ನಗರದ ಸ್ನೇಹಿತರೊಬ್ಬರಿಗೆ ಮಾಹಿತಿ ರವಾನಿಸಿದ್ದಾರೆ.</p>.<p>‘ಮಂಗಳವಾರ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಇದರಿಂದ ಅವರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ’ ಎಂದು ಸುಜಯ್ ಕುಮಾರ್ ಅವರ ಸ್ನೇಹಿತ ಟಿ.ಎಸ್. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಉತ್ತರ ಭಾರತದ ಪ್ರವಾಸಕ್ಕೆ ತೆರಳಿದ್ದ ನಗರದ ಎರಡು ವರ್ತಕರ ಕುಟುಂಬಗಳ ಆರು ಮಂದಿ ಹಿಮಾಚಲ ಪ್ರದೇಶದ ಪ್ರವಾಹದಲ್ಲಿ ಸಿಲುಕಿದ್ದಾರೆ. </p>.<p>ಟ್ರಾವೆಲ್ ಏಜೆನ್ಸಿಯೊಂದು ರಾಜ್ಯದ 105 ಮಂದಿಯನ್ನು ಉತ್ತರ ಭಾರತದ ಪ್ರವಾಸಕ್ಕೆ ಕರೆದುಕೊಂಡು ಹೋಗಿದೆ. ಇದರಲ್ಲಿ ನಗರದ ಗ್ರೇಟ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಮಾಲೀಕ ಸುಜಯ್ ಕುಮಾರ್, ಪತ್ನಿ, ಮಗಳು ಮತ್ತು ಚೌಡೇಶ್ವರಿ ಎಲೆಕ್ಟ್ರಾನಿಕ್ಸ್ ಮಾಲೀಕ ರಘುನಾಥರೆಡ್ಡಿ ಕುಟುಂಬದ ಮೂವರು ಪ್ರವಾಸಕ್ಕೆ ತೆರಳಿದ್ದಾರೆ. </p>.<p>ಭಾನುವಾರ ಕುಲು ಮನಾಲಿಯ ಪಂಚತಾರಾ ಹೋಟೆಲ್ನಲ್ಲಿ ಈ ಕುಟುಂಬಗಳು ತಂಗಿವೆ. ಹಿಮಾಚಲ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಹೋಟೆಲ್ನ ನೆಲ ಅಂತಸ್ತಿಗೆ ಮಳೆ ನೀರು ನುಗ್ಗಿದೆ.</p>.<p>‘ಹೋಟೆಲ್ನಿಂದ ಯಾರಿಗೂ ಹೊರಬರಲು ಸಾಧ್ಯವಾಗುತ್ತಿಲ್ಲ. ವಿದ್ಯುತ್, ಅಂತರ್ಜಾಲ ಸಂಪರ್ಕ ಕಡಿತಗೊಂಡಿದೆ. ಊಟ, ತಿಂಡಿಗೂ ಪರದಾಡುವಂತಾಗಿದೆ’ ಎಂದು ಸುಜಯ್ ಕುಮಾರ್ ಸೋಮವಾರ ನಗರದ ಸ್ನೇಹಿತರೊಬ್ಬರಿಗೆ ಮಾಹಿತಿ ರವಾನಿಸಿದ್ದಾರೆ.</p>.<p>‘ಮಂಗಳವಾರ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಇದರಿಂದ ಅವರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ’ ಎಂದು ಸುಜಯ್ ಕುಮಾರ್ ಅವರ ಸ್ನೇಹಿತ ಟಿ.ಎಸ್. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>