ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕರ್ನಾಟಕ ಎಕ್ಸ್‌ಪ್ರೆಸ್‌ನಲ್ಲಿ ಬಾಂಬ್, ಹುಸಿ ಕರೆ ಮಾಡಿದವನ ಸೆರೆ

Last Updated 15 ಡಿಸೆಂಬರ್ 2021, 6:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ದೆಹಲಿ ಮತ್ತು ಕರ್ನಾಟಕ ನಡುವೆ ಸಂಚರಿಸುವ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಬಾಂಬ್ ನಿಷ್ಕ್ರಿಯ ದಳ, ರೈಲ್ವೆ ಹಾಗೂ ಪೊಲೀಸ್ ಅಧಿಕಾರಿಗಳು ರೈಲಿನಲ್ಲಿ ತಪಾಸಣೆ ನಡೆಸಿದ್ದಾರೆ.

ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ರಾಯಚೂರಿನ ವಾಡಿಯಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ ದಾಟಿದ ನಂತರ ಈ ರೈಲು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪುತ್ತದೆ.

ರೈಲು ನಿಲ್ಲಿಸಿ ತಪಾಸಣೆ ನಡೆಸಿದರೆ ಜನರು ಭಯಗೊಳ್ಳುವರು. ಈ ಮೇರೆಗೆ ಚಲಿಸುತ್ತಿರುವ ರೈಲಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ಇಡಲಾಗಿದೆ ಎಂದು ಕರೆ ಮಾಡಿದ್ದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ‌. ಇದು ಸುಳ್ಳು ಕರೆ ಆಗಿದೆ. ಹೀಗಿದ್ದರೂ ತಪಾಸಣೆ ನಡೆಯುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಪ್ರಜಾವಾಣಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT