ಗುಡಿಬಂಡೆ: ತಾಲ್ಲೂಕಿನ ವರ್ಲಕೊಂಡ ಸಮೀಪದ ಶಾಷಿಬ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಕೋವಿಡ್ ನಿಯಮ ಪಾಲಿಸದೇ ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಹಚ್ಚಿಕೊಳ್ಳುವುದು, ನೃತ್ಯ ಇತ್ಯಾದಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಂಡಿದ್ದರು. ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್ ಸಿಗಬತ್ತುಲ್ಲಾ ಕಾರ್ಯಕ್ರಮವನ್ನು ರದ್ದುಪಡಿಸಿ, ಕಾಲೇಜು ಆಡಳಿತಕ್ಕೆ ಎಚ್ಚರಿಕೆ ನೀಡಿದರು.