<p><strong>ಚಿಂತಾಮಣಿ: </strong>ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ಜಡಿ ಮಳೆಗೆ ಮನೆ ಕುಸಿದು, ತಂದೆ ಮತ್ತು ಮಗ ಮೃತಪಟ್ಟಿದ್ದ ಕುಟುಂಬಕ್ಕೆ ಬುಧವಾರ ಶಾಸಕ ಎಂ.ಕೃಷ್ಣಾರೆಡ್ಡಿ ₹10 ಲಕ್ಷದ ಪರಿಹಾರದ ಚೆಕ್ ವಿತರಿಸಿದರು.</p>.<p>ಗ್ರಾಮದಲ್ಲಿ ಅ.23ರಂದು ಜಡಿಮಳೆಯಿಂದಾಗಿ ನಸುಕಿನಲ್ಲಿ ಮನೆಯ ಚಾವಣಿ ಕುಸಿದುಬಿದ್ದು ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು. ಶಾಸಕ ಎಂ.ಕೃಷ್ಣಾರೆಡ್ಡಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಹಾಗೂ ವೈಯಕ್ತಿಕವಾಗಿ ತಲಾ ₹50 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು.</p>.<p>ಅವರ ಸೂಚನೆಯಂತೆ ಅಧಿಕಾರಿಗಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ತಲಾ ₹5 ಲಕ್ಷ ಪರಿಹಾರ ಮಂಜೂರು ಮಾಡಿತ್ತು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮೃತರ ಪತ್ನಿ ಮುನಿರಾಜಮ್ಮ ಅವರಿಗೆ ಸರ್ಕಾರದ ₹10 ಲಕ್ಷ ಹಾಗೂ ವೈಯಕ್ತಿಕ ₹1 ಲಕ್ಷ ಮೊತ್ತದ ಚೆಕ್ಗಳನ್ನು ಶಾಸಕರು ವಿತರಿಸಿದರು.</p>.<p>‘ಗ್ರಾಮ ಪಂಚಾಯಿತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುವುದು. ಮನೆಯಲ್ಲಿದ್ದ ಗಾಯಾಳುಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬಂದಿದ್ದು ತಡವಾಯಿತು. ಅಷ್ಟರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದ ಸ್ವಲ್ಪ ತಡವಾಗಿದೆ. ಅವರಿಗೆ ಮೊದಲಿನಂತೆ<br />ಮನೆಯನ್ನು ನಿರ್ಮಿಸಿಕೊಡಲಾಗುವುದು’ ಎಂದರು.<br />ತಹಶೀಲ್ದಾರ್ ಹನುಮಂತರಾಯಪ್ಪ, ಜೆ.ಡಿ.ಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ಜಡಿ ಮಳೆಗೆ ಮನೆ ಕುಸಿದು, ತಂದೆ ಮತ್ತು ಮಗ ಮೃತಪಟ್ಟಿದ್ದ ಕುಟುಂಬಕ್ಕೆ ಬುಧವಾರ ಶಾಸಕ ಎಂ.ಕೃಷ್ಣಾರೆಡ್ಡಿ ₹10 ಲಕ್ಷದ ಪರಿಹಾರದ ಚೆಕ್ ವಿತರಿಸಿದರು.</p>.<p>ಗ್ರಾಮದಲ್ಲಿ ಅ.23ರಂದು ಜಡಿಮಳೆಯಿಂದಾಗಿ ನಸುಕಿನಲ್ಲಿ ಮನೆಯ ಚಾವಣಿ ಕುಸಿದುಬಿದ್ದು ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು. ಶಾಸಕ ಎಂ.ಕೃಷ್ಣಾರೆಡ್ಡಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಹಾಗೂ ವೈಯಕ್ತಿಕವಾಗಿ ತಲಾ ₹50 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು.</p>.<p>ಅವರ ಸೂಚನೆಯಂತೆ ಅಧಿಕಾರಿಗಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ತಲಾ ₹5 ಲಕ್ಷ ಪರಿಹಾರ ಮಂಜೂರು ಮಾಡಿತ್ತು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮೃತರ ಪತ್ನಿ ಮುನಿರಾಜಮ್ಮ ಅವರಿಗೆ ಸರ್ಕಾರದ ₹10 ಲಕ್ಷ ಹಾಗೂ ವೈಯಕ್ತಿಕ ₹1 ಲಕ್ಷ ಮೊತ್ತದ ಚೆಕ್ಗಳನ್ನು ಶಾಸಕರು ವಿತರಿಸಿದರು.</p>.<p>‘ಗ್ರಾಮ ಪಂಚಾಯಿತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುವುದು. ಮನೆಯಲ್ಲಿದ್ದ ಗಾಯಾಳುಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬಂದಿದ್ದು ತಡವಾಯಿತು. ಅಷ್ಟರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದ ಸ್ವಲ್ಪ ತಡವಾಗಿದೆ. ಅವರಿಗೆ ಮೊದಲಿನಂತೆ<br />ಮನೆಯನ್ನು ನಿರ್ಮಿಸಿಕೊಡಲಾಗುವುದು’ ಎಂದರು.<br />ತಹಶೀಲ್ದಾರ್ ಹನುಮಂತರಾಯಪ್ಪ, ಜೆ.ಡಿ.ಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>